ಸುಡಾನ್‌ | ಆರ್‌ಎಸ್‌ಎಫ್‌ನಿಂದ ಭೀಕರ ನರಮೇಧ: ಮೂರು ದಿನಗಳಲ್ಲಿ 1,500ಕ್ಕೂ ಹೆಚ್ಚು ಮಂದಿ ಹತ್ಯೆ

Date:

ಸುಡಾನ್‌ ದೇಶದ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ, ಕಳೆದ ಮೂರು ದಿನಗಳಲ್ಲಿ ಅರೆ ಸೈನಿಕ ಪಡೆ ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಕನಿಷ್ಠ 1,500 ಜನರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ರಾಜಧಾನಿ ಅಲ್‌-ಪಾಶೆರ್ ಅನ್ನು ಸಂಪೂರ್ಣ ವಶಕ್ಕೆ ಪಡೆದಿರುವ ಆರ್‌ಎಸ್‌ಎಫ್‌, ಇಡೀ ದಾರ್ಫರ್ ರಾಜ್ಯವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. 2023ರಿಂದ ಸಂಪೂರ್ಣ ಸುಡಾನ್‌ ಅನ್ನು ನಿಯಂತ್ರಣಕ್ಕೆ ಪಡೆಯಲು ಆರ್‌ಎಸ್‌ಎಫ್‌ ಸುಡಾನ್ ಸೇನೆಯೊಂದಿಗೆ ಸಂಘರ್ಷದಲ್ಲಿ ತೊಡಗಿದೆ.

ಆರ್‌ಎಸ್‌ಎಫ್‌ ಕೈಯಿಂದ ಜೀವ ಕಾಪಾಡಿಕೊಳ್ಳಲು ಜನರು ಪಲಾಯನ ಮಾಡುತ್ತಿದ್ದಾರೆ. ಈ ವೇಳೆ ಅವರನ್ನು ಹಿಡಿದು ನಿರ್ದಯವಾಗಿ ಹತ್ಯೆ ಮಾಡಲಾಗುತ್ತಿದೆ. ಮನೆಗಳಿಗೆ ನುಗ್ಗಿ ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಇದು ‘ನಿಜವಾದ ನರಮೇಧ’ ಎಂದು ದೇಶದ ಅಂತರ್ಯುದ್ಧವನ್ನು ವರದಿ ಮಾಡುವ ಗುಂಪು ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಜಗತ್ತು ನೋಡುತ್ತಿರುವ ಹತ್ಯಾಕಾಂಡಗಳು ಒಂದೂವರೆ ವರ್ಷದ ಹಿಂದೆ ಅಲ್‌-ಫಾಶೆರ್‌ನಲ್ಲಿ ನಡೆದ ಹತ್ಯಾಕಾಂಡದ ಮುಂದುವರಿದ ಭಾಗವಾಗಿದೆ. ಆ ಸಮಯದಲ್ಲಿ ಬಾಂಬ್ ದಾಳಿ, ಹಸಿವು ಮತ್ತು ಕಾನೂನುಬಾಹಿರ ಮರಣದಂಡನೆಗಳ ಮೂಲಕ 14,000ಕ್ಕೂ ಹೆಚ್ಚು ನಾಗರಿಕರು ಕೊಲ್ಲಲ್ಪಟ್ಟಿದ್ದರು” ಎಂದು ಡಾಕ್ಟರ್ಸ್ ನೆಟ್‌ವರ್ಕ್ ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟನಲ್ ರೋಡ್ ದೈತ್ಯ ಯೋಜನೆಯನ್ನು ಸಾರ್ವಜನಿಕ ಚರ್ಚೆಗಿಡಲಿ ಸರ್ಕಾರ

ಅಕ್ಟೋಬರ್ 26ರಂದು ಆರ್‌ಎಸ್‌ಎಫ್‌ ಅಲ್‌-ಫಾಶೆರ್ ಅನ್ನು ವಶಪಡಿಸಿಕೊಂಡ ಬಳಿಕ, ಯೇಲ್ ವಿಶ್ವವಿದ್ಯಾನಿಲಯದ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್, ತಾನು ತೆಗೆದ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಶವಗಳ ರಾಶಿ, ದೊಡ್ಡ ಮಟ್ಟದ ರಕ್ತದ ಕಲೆಗಳು ಗೋಚರವಾಗಿವೆ. ಇವುಗಳು ಭೀಕರ ನರಮೇಧವನ್ನು ಸೂಚಿಸುತ್ತದೆ ಎಂದು ವರದಿಗಳು ಹೇಳಿತ್ತು.

ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಒಕ್ಕೂಟಗಳು ಹಿಂಸಾಚಾರವನ್ನು ಖಂಡಿಸಿತ್ತು. ಶಾಂತಿಗೆ ಕರೆ ಕೊಟ್ಟಿತ್ತು. ಈ ಬೆನ್ನಲ್ಲೇ ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ನೀಡಿರುವ ಭೀಕರದ ನರಮೇಧದ ವರದಿ ಜಗತ್ತನ್ನು ಬೆಚ್ಚಿ ಬೀಳಿಸಿದೆ.

ಆರ್‌ಎಸ್‌ಎಫ್ 2023ರಿಂದ ಸುಡಾನ್ ಸೈನ್ಯದೊಂದಿಗೆ ರಕ್ತಸಿಕ್ತ ಅಂತರ್ಯುದ್ಧದಲ್ಲಿ ತೊಡಗಿಕೊಂಡಿದೆ. ಪರಿಣಾಮ ಹತ್ತಾರು ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 12 ದಶಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಕಳೆದ 17 ತಿಂಗಳ ಮುತ್ತಿಗೆಯ ನಂತರ ಅಕ್ಟೋಬರ್ 26, 2025ರಂದು ದಾರ್ಫರ್‌ನಲ್ಲಿ ಸೇನೆಯ ಕೊನೆಯ ಭದ್ರಕೋಟೆಯಾದ ಅಲ್‌-ಫಾಶೆರ್ ಅನ್ನು ಅರೆಸೈನಿಕ ಪಡೆ ಆರ್‌ಎಸ್‌ಎಫ್ ವಶಪಡಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...