ಹೌತಿ ಬಂಡುಕೋರರಿಂದ ಶಂಕಿತ ಕ್ಷಿಪಣಿ ದಾಳಿ; ಕಂಟೇನರ್ ಹಡಗಿಗೆ ಹಾನಿ

Date:

 ಯೆಮೆನ್‌ನ ಹೌತಿ ಬಂಡುಕೋರರು ನಡೆಸಿದ್ದಾರೆ ಎನ್ನಲಾದ ಕ್ಷಿಪಣಿ ದಾಳಿಯಿಂದಾಗಿ ಗಲ್ಫ್ ಆಫ್ ಅಡೆನ್ ಮೂಲಕ ಪ್ರಯಾಣಿಸುತ್ತಿದ್ದ ಕಂಟೇನರ್ ಹಡಗಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಗೆ ಪ್ರತಿಕಾರವಾಗಿ ಹೌತಿ ಬಂಡುಕೋರರು ಪ್ರತಿದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ನವೆಂಬರ್‌ನಲ್ಲಿ ಗಾಜಾ ಪಟ್ಟಿಯಲ್ಲಿರುವ ಹಮಾಸ್‌ ಮೇಲೆ ಇಸ್ರೇಲ್‌ ದಾಳಿ ಪ್ರರಂಭವಾದಾಗಿನಿಂದ ದಾಳಿ-ಪ್ರತಿದಾಳಿಗಳು ನಡೆಯುತ್ತಿವೆ. ಇತ್ತೀಚಿಗೆ, ದಾಳಿಗಳು ಸ್ಥಗಿತಗೊಂಡಿದ್ದರು. ಆದರೆ, ಇರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನು ಇಸ್ರೇಲ್ ಹತ್ಯೆಗೈದ ಬಳಿ, ಪ್ರತಿದಾಳಿಗಳು ಮತ್ತೆ ಆರಂಭವಾಗಿವೆ.

ಶನಿವಾರ ನಡೆದ ದಾಳಿಯಲ್ಲಿ, ಹಡಗಿನ ಮೇಲೆ ಕ್ಷಿಪಣಿ ದಾಳಿ ನಡೆದಿದೆ ಎಂದು ಹಡಗಿನ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಹಗಡಿನಲ್ಲಿ ಯಾವುದೇ ಬೆಂಕಿ, ನೀರಿನ ಒಳಹರಿವು ಅಥವಾ ತೈಲ ಸೋರಿಕೆ ಕಂಡುಬಂದಿಲ್ಲ ಎಂದು ಬ್ರಿಟಿಷ್ ಮಿಲಿಟರಿಯ ಯುನೈಟೆಡ್ ಕಿಂಗ್‌ಡಮ್ ಮಾರಿಟೈಮ್ ಟ್ರೇಡ್ ಆಪರೇಷನ್ ಸೆಂಟರ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಸಗಿ ಭದ್ರತಾ ಸಂಸ್ಥೆ ಅಂಬ್ರೆ ಕೂಡ ದಾಳಿಯ ಬಗ್ಗೆ ವರದಿ ಮಾಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಫುಜೈರಾದಿಂದ ಸೌದಿ ಅರೇಬಿಯಾದ ಜೆಡ್ಡಾಕ್ಕೆ ಹೊರಟಿದ್ದ ಲೈಬೀರಿಯನ್ ಧ್ವಜದ ಕಂಟೈನರ್ ಹಡಗಿನ ಮೇಲೆ ದಾಳಿ ನಡೆದಿದೆ ಎಂದು ವರದಿ ಮಾಡಿವೆ.

ಹೌತಿ ಬಂಡುಕೋರರು ತಮ್ಮ ಕಾರ್ಯಾಚರಣೆಯಲ್ಲಿ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸುವ ಮೂಲಕ 70ಕ್ಕೂ ಹೆಚ್ಚು ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಈಗಾಗಲೇ ನಾಲ್ಕು ನಾವಿಕರನ್ನು ಕೊಂದಿದ್ದಾರೆ. ಒಂದು ಹಡಗನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ತಮ್ಮ ದಾಳಿಗಳು ಇಸ್ರೇಲ್, ಅಮೆರಿಕ ಅಥವಾ ಬ್ರಿಟನ್‌ಗೆ ಸಂಬಂಧಿಸಿರುವ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದು, ಆ ಮೂಲಕ ಗಾಜಾ ಪಟ್ಟಿಯಲ್ಲಿ ಇಸ್ರೇಲ್-ಹಮಾಸ್ ಯುದ್ಧವನ್ನು ನಿಲ್ಲಿಸಲು ಒತ್ತಾಯಿಸಲಾಗುತ್ತಿದೆ ಎಂದು ಹೌತಿಗಳು ಸಮರ್ಥಿಸಿಕೊಂಡಿದ್ದಾರೆ. ಆದಾಗ್ಯೂ, ದಾಳಿಗೊಳಗಾದ ಅನೇಕ ಹಡಗುಗಳು ಈ ರಾಷ್ಟ್ರಗಳಿಗೆ ಸಂಬಂಧಿಸಿದವಲ್ಲ. ಕೆಲವು ಇರಾನ್‌ಗೆ ಸಂಬಂಧಿಸಿದ ಹಡಗುಗಳಾಗಿವೆ ಎಂದು ಹೇಳಲಾಗಿದೆ.

ಹೌತಿಗಳು ಇಸ್ರೇಲ್ ಕಡೆಗೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಉಡಾಯಿಸಿದ್ದಾರೆ. ಜುಲೈ 19 ರಂದು ನಡೆದ ದಾಲಿಯಲ್ಲಿ ಟೆಲ್ ಅವಿವ್‌ನಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್ ಮರುದಿನ ಹೌತಿಗಳ ಹಿಡಿತದಲ್ಲಿರುವ ಬಂದರು ನಗರವಾದ ‘ಹೊಡೆಡಾ’ದ ಮೇಲೆ ವಾಯುದಾಳಿ ನಡೆಸಿದ್ದು, ಇಂಧನ ಡಿಪೋಗಳು ಮತ್ತು ವಿದ್ಯುತ್ ಕೇಂದ್ರಗಳನ್ನು ಧ್ವಂಸಗೊಳಿಸಿದೆ. ಹಲವಾರು ಜನರನ್ನು ಹತ್ಯೆಗೈದಿದೆ ಎಂದು ಹೌತಿಗಳು ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ಶೋಷಿತರ ವಿರುದ್ಧ ಅಸ್ತ್ರವಾದ ಅತ್ಯಾಚಾರ; ಇಸ್ರೇಲ್‌ನಿಂದ ಹೇಯ ಕೃತ್ಯ – ಭಾರತವೂ ಹೊರತಾಗಿಲ್ಲ

ಟೆಹ್ರಾನ್‌ನಲ್ಲಿ ಹಮಾಸ್‌ ನಾಯಕನ ಹತ್ಯೆಯು ಇಸ್ರೇಲ್-ಹಮಾಸ್ ನಡುವೆ ಹೊಸ ಪ್ರಕ್ಷುಬ್ದತೆಯನ್ನು ಹುಟ್ಟುಹಾಕಿದೆ. ಮಧ್ಯಪ್ರಾಚ್ಯಕ್ಕೆ ಫೈಟರ್ ಜೆಟ್ ಸ್ಕ್ವಾಡ್ರನ್ ಅನ್ನು ಕಳಿಸುವುದಾಗಿ ಮತ್ತು ಆ ಪ್ರದೇಶದಲ್ಲಿ ವಿಮಾನವಾಹಕ ನೌಕೆಯನ್ನು ನಿಯೋಜಿಸುವುದಾಗಿ ಅಮೆರಿಕ ಮಿಲಿಟರಿ ಹೀಗಾಗಲೇ ಹೇಳಿದೆ.

ಏತನ್ಮಧ್ಯೆ, ಶನಿವಾರ, ಅಮೆರಿಕ ಮಿಲಿಟರಿಯ ಸೆಂಟ್ರಲ್ ಕಮಾಂಡ್ ಪಡೆಗಳು ಯೆಮೆನ್‌ನಲ್ಲಿ ಹೌತಿ ಕ್ಷಿಪಣಿ ಮತ್ತು ಲಾಂಚರ್ ಅನ್ನು ನಾಶಪಡಿಸಿವೆ ಎಂದು ವರದಿಯಾಗಿದೆ.

1,200 ಜನರನ್ನು ಕೊಂದು, 250 ಜನರನ್ನು ಒತ್ತೆಯಾಳಾಗಿಸಿಕೊಂಡ ಇಸ್ರೇಲ್ ಮೇಲೆ ಹಮಾಸ್ ಅಕ್ಟೋಬರ್ 7ರಂದು ದಾಳಿ ನಡೆಸಿತ್ತು. ಈ ದಾಳಿಯು ಯುದ್ಧವನ್ನು ಹುಟ್ಟುಹಾಕಿತು. ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಿರಂತರ ದಾಳಿ ನಡೆಸಿದ್ದು, ಈವರೆಗೆ ಕನಿಷ್ಠ 39,550 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...