ತೈವಾನ್‌ | ಭೂಕಂಪಕ್ಕೆ 9 ಬಲಿ, ಇಬ್ಬರು ಭಾರತೀಯರು ನಾಪತ್ತೆ

Date:

ತೈವಾನ್‌ನಲ್ಲಿ ಬುಧವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈವರೆಗೆ ಸುಮಾರು 9 ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಇನ್ನು ನಾಪತ್ತೆಯಾದ ಭಾರತೀಯರಲ್ಲಿ ಓರ್ವ ಮಹಿಳೆ ಎಂಬ ಮಾಹಿತಿ ತಿಳಿದು ಬಂದಿದೆ. ಇಬ್ಬರೂ ಭಾರತೀಯರು ಭೂಕಂಪ ನಡೆದ ಸ್ಥಳದ ಸಮೀಪವಿರುವ ತಾರೊಕೊ ಗಾರ್ಜ್‌ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಬೆಳಗ್ಗೆ ಪೂರ್ವ ತೈವಾನ್‌ನಲ್ಲಿ 25 ವರ್ಷಗಳಲ್ಲಿ ಅತ್ಯಂತ ಪ್ರಬಲವಾದ 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಎಪಿ ವರದಿಯ ಪ್ರಕಾರ ಭೂಕಂಪದ ಬಳಿಕ ನಾಪತ್ತೆಯಾಗಿರುವ ಭಾರತೀಯರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನು ಓದಿದ್ದೀರಾ?  ತೈವಾನ್‌ | 25 ವರ್ಷಗಳಲ್ಲೇ ಅತ್ಯಂತ ಪ್ರಬಲ ಭೂಕಂಪ; ನಾಲ್ವರು ಸಾವು, ಸುನಾಮಿ ಎಚ್ಚರಿಕೆ

ತೈವಾನ್‌ನಲ್ಲಿ ಸಂಭವಿಸಿದ ಈ ಭೂಕಂಪವು “25 ವರ್ಷಗಳಲ್ಲಿ ಅತ್ಯಂತ ಪ್ರಬಲವಾದ ಭೂಕಂಪ” ಎಂದು ತೈಪೆಯ ಭೂಕಂಪನದ ಅಧಿಕಾರಿ ತಿಳಿಸಿದ್ದಾರೆ. ಭೂಕಂಪದ ಬಳಿಕ ತೈವಾನ್, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್‌ನಾದ್ಯಂತ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಇನ್ನು ಇಂಡಿಯಾ ತೈಪೆ ಅಸೋಸಿಯೇಷನ್ ತೈವಾನ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ತೈವಾನ್‌ನಲ್ಲಿರುವ ಭಾರತೀಯರು ಸಹಾಯಕ್ಕಾಗಿ 0905247906 ಗೆ ಕರೆ ಮಾಡಬಹುದು ಅಥವಾ ad.ita@mea.gov.in ಗೆ ಇಮೇಲ್ ಕಳುಹಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...