ಫೋನ್‌ ಸಂಭಾಷಣೆ ಸೋರಿಕೆ; ನ್ಯಾಯಾಲಯದಿಂದ ಥಾಯ್ಲೆಂಡ್‌ನ ಪ್ರಧಾನಿ ಪದಚ್ಯುತಿ

Date:

ಥಾಯ್ಲೆಂಡ್‌ನ ಪ್ರಧಾನಿ ಪೇಟಾಂಗ್‌ತಾರ್ನ್ ಶಿನವಾತ್ರಾ ಅವರನ್ನು ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದೊಳಗೆ ಸಾಂವಿಧಾನಿಕ ನ್ಯಾಯಾಲಯವು ಹುದ್ದೆಯಿಂದ ವಜಾಗೊಳಿಸಿದೆ. ಕಾಂಬೋಡಿಯಾದ ಮಾಜಿ ನಾಯಕನೊಂದಿಗಿನ ಫೋನ್ ಸಂಭಾಷಣೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಶಿನವಾತ್ರಾ ಅವರು ಶಿಷ್ಟಾಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಕಳೆದ 17 ವರ್ಷಗಳ ಅವಧಿಯಲ್ಲಿ ನಿಯಮ ಮೀರಿದ್ದ ಪ್ರಧಾನಿಗಳ ವಿರುದ್ಧ ಥೈಲ್ಯಾಂಡ್‌ ಸಾಂವಿಧಾನಿಕ ಕೋರ್ಟ್‌ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದು, ಇದೀಗ ಶಿನವಾತ್ರ ಈ ಹುದ್ದೆಯಿಂದ ಪದಚ್ಯುತಗೊಂಡ ಐದನೇ ಪ್ರಧಾನಿಯಾಗಿದ್ದಾರೆ.

ಈ ತೀರ್ಪಿನ ನಂತರ, ಉಪ ಪ್ರಧಾನಮಂತ್ರಿ ಫುಮ್‌ಥಾಮ್ ವೆಚಯಾಚೈ ಮತ್ತು ಪ್ರಸ್ತುತ ಕ್ಯಾಬಿನೆಟ್ ಸದಸ್ಯರು ಹೊಸ ಪ್ರಧಾನಿಯನ್ನು ಸಂಸತ್ತು ಆಯ್ಕೆ ಮಾಡುವವರೆಗೆ ತಾತ್ಕಾಲಿಕವಾಗಿ ಸರ್ಕಾರವನ್ನು ಮುನ್ನಡೆಸಲಿದ್ದಾರೆ. ಹೊಸ ಪ್ರಧಾನಮಂತ್ರಿಯ ಆಯ್ಕೆಗಾಗಿ ಸಂಸತ್ತಿನ ಸ್ಪೀಕರ್ ದಿನಾಂಕವನ್ನು ನಿರ್ಧರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್ತಿನ ಸ್ಪೀಕರ್‌ರಿಂದ ನಿಗದಿಪಡಿಸಲಾಗುವ ದಿನಾಂಕದಂದು ಹೊಸ ಪ್ರಧಾನಮಂತ್ರಿಯ ಆಯ್ಕೆಗಾಗಿ ಸಂಸತ್ತು ಸಭೆ ಸೇರಲಿದೆ. 2023ರ ಚುನಾವಣೆಯ ಮೊದಲು ಘೋಷಿತವಾದ ಐದು ಅರ್ಹ ಅಭ್ಯರ್ಥಿಗಳು ಈಗಲೂ ಸ್ಪರ್ಧೆಯಲ್ಲಿದ್ದಾರೆ. ಫಿಯು ಥಾಯ್‌ ಪಕ್ಷದಿಂದ ಆರಂಭದಲ್ಲಿ ಮೂವರು ಅಭ್ಯರ್ಥಿಗಳಿದ್ದರೂ, ಈಗ ಕೇವಲ ಚೈಕಾಸೆಮ್ ನಿಟಿಸಿರಿ (77) ಒಬ್ಬರೇ ಉಳಿದಿದ್ದಾರೆ. ಮಾಜಿ ನ್ಯಾಯಾಂಗ ಸಚಿವ ಮತ್ತು ಅಟಾರ್ನಿ ಜನರಲ್ ಆಗಿದ್ದ ಇವರು, ಕಡಿಮೆ ಪ್ರಚಾರದಲ್ಲಿದ್ದರೂ, ಪ್ರಧಾನಮಂತ್ರಿ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ಇನ್ನೊಬ್ಬರು ಪ್ರಮುಖ ಅಭ್ಯರ್ಥಿಯಾಗಿರುವ ಭುಮ್‌ಜೈಥಾಯ್‌ ಪಕ್ಷದ ಅನುಟಿನ್ ಚಾರ್ನ್‌ವಿರಾಕುಲ್ (58), ಮಾಜಿ ಗೃಹ ಸಚಿವ ಮತ್ತು ಉಪ ಪ್ರಧಾನಮಂತ್ರಿಯಾಗಿದ್ದವರು, ಇವರ ಪಕ್ಷವು ಜೂನ್‌ನಲ್ಲಿ ಶಿನವಾತ್ರಾ ಅವರ ಒಕ್ಕೂಟದಿಂದ ಹೊರಬಂದಿದ್ದರೂ, ಪ್ರಧಾನಿ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಇವರ ಜೊತೆಗೆ, ಪ್ರಸ್ತುತ ಇಂಧನ ಸಚಿವರಾದ ಪಿರಪಾನ್ ಸಲಿರಥವಿಭಾಗ ಮತ್ತು 2014ರಲ್ಲಿ ಫಿಯು ಥಾಯ್‌ ಸರ್ಕಾರದ ವಿರುದ್ಧ ದಂಗೆ ನಡೆಸಿದ ಮಾಜಿ ಪ್ರಧಾನಮಂತ್ರಿ ಪ್ರಯುತ್ ಚಾನ್-ಓ-ಚಾ (71) ಕೂಡ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ.

ನೂತನ ಪ್ರಧಾನಿಯಾಗಲು ಕನಿಷ್ಠ 50 ಸಂಸದರಿಂದ ಬೆಂಬಲ ದೊರಕಬೇಕು. ಬಳಿಕ, ಹಾಲಿ 492 ಸದಸ್ಯರಲ್ಲಿನ ಕನಿಷ್ಠ 247 ಮತಗಳನ್ನು ಪಡೆಯಬೇಕು. ಯಾವುದೇ ಅಭ್ಯರ್ಥಿ ವಿಫಲವಾದರೆ, ಮತ್ತೆ ಸಭೆ ಸೇರಿ ಮುಂದಿನ ಅಭ್ಯರ್ಥಿಗಳ ಹೆಸರಿನ ಮೇಲೆ ಮತದಾನ ನಡೆಯುತ್ತದೆ. ಈ ಪ್ರಕ್ರಿಯೆಗೆ ಯಾವುದೇ ಕಾಲಮಿತಿ ವಿಧಿಸಲಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...