ಥಾಯ್ಲೆಂಡ್‌, ಕಾಂಬೋಡಿಯಾ ಕದನ ವಿರಾಮ ಮಾತುಕತೆಗೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್

Date:

ಥಾಯ್ಲೆಂಡ್‌ ಮತ್ತು ಕಾಂಬೋಡಿಯಾ ತಕ್ಷಣ ಕದನ ವಿರಾಮ ಮಾತುಕತೆ ನಡೆಸಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಥಾಯ್ಲೆಂಡ್‌ ಮತ್ತು ಕಾಂಬೋಡಿಯಾ ನಡುವಿನ ಮೂರು ದಿನಗಳ ಗಡಿ ಘರ್ಷಣೆಯಲ್ಲಿ 30ಕ್ಕೂ ಅಧಿಕ ಜನರು ಮೃತಪಟ್ಟು, ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ಕಾಂಬೋಡಿಯಾ ಪ್ರಧಾನಿ ಹನ್ ಮಾನೆಟ್ ಮತ್ತು ಥಾಯ್ಲೆಂಡ್‌ನ ಹಂಗಾಮಿ ಪ್ರಧಾನಿ ಫುಮ್ಥಾಮ್ ವೆಚಾಯಾಚೈ ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದೇನೆ. ಸಂಘರ್ಷ ಮುಂದುವರಿಸುವುದರಿಂದ ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದಗಳಿಗೆ ಅಡ್ಡಿಯಾಗಬಹುದು ಎಂದು ಇಬ್ಬರೂ ನಾಯಕರಿಗೆ ಎಚ್ಚರಿಕೆ ನೀಡಿದ್ದೇನೆ. ಎರಡೂ ರಾಷ್ಟ್ರಗಳು ತಕ್ಷಣದ ಕದನ ವಿರಾಮ ಮತ್ತು ಶಾಂತಿಯನ್ನು ಬಯಸುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಶ್ವೇತಭವನವಾಗಲಿ ಅಥವಾ ರಾಯಭಾರಿ ಕಚೇರಿಯಾಗಲಿ ಪ್ರಸ್ತಾವಿತ ಮಾತುಕತೆಯ ಸಮಯ ಅಥವಾ ವಿವರಗಳನ್ನು ದೃಢಪಡಿಸಲಿಲ್ಲ.

ಕಾಂಬೋಡಿಯಾ-ಥಾಯ್ಲೆಂಡ್‌ ಗಡಿ ಉದ್ವಿಗ್ನತೆಯನ್ನು ಟ್ರಂಪ್ ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷಕ್ಕೆ ಹೋಲಿಕೆ ಮಾಡಿದ್ದಾರೆ. ಅದನ್ನು ಯಶಸ್ವಿಯಾಗಿ ನಿಲ್ಲಿಸಲಾಯಿತು. ಇಲ್ಲಿ ಕೂಡ ಶಾಂತಿಯನ್ನು ಸ್ಥಾಪಿಸಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು

ಎರಡೂ ದೇಶಗಳು ತಕ್ಷಣವೇ ಕದನ ವಿರಾಮ ಘೋಷಿಸುವಂತೆ, ಇದಕ್ಕಾಗಿ ಮಧ್ಯಪ್ರವೇಶ ಮಾಡುವಂತೆ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘಕ್ಕೆ (ಆಸಿಯಾನ್‌) ವಿಶ್ವಸಂಸ್ಥೆ ಕರೆ ನೀಡಿದೆ.

ಕಾಂಬೋಡಿಯಾದೊಂದಿಗೆ ಹಂಚಿಕೊಂಡಿದ್ದ ಈಶಾನ್ಯ ಗಡಿಯನ್ನು ಥಾಯ್ಲೆಂಡ್‌ ಶನಿವಾರ ಮುಚ್ಚಿದೆ. ಥಾಯ್ಲೆಂಡ್‌ ನಡೆಸಿದ ದಾಳಿಯಲ್ಲಿ 13 ಮಂದಿ ಮೃತಪಟ್ಟಿರುವುದಾಗಿ ಕಾಂಬೋಡಿಯಾ ಹೇಳಿದೆ. ಕಾಂಬೋಡಿಯಾ ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಥಾಯ್ಲೆಂಡ್‌ ಹೇಳಿದೆ. ಎರಡೂ ದೇಶಗಳು ದಾಳಿ ಮುಂದುವರಿಸಿರುವುದಾಗಿ ಹೇಳಿಕೊಂಡಿದ್ದು, ತಮ್ಮ ರಾಯಭಾರ ಅಧಿಕಾರಿಗಳನ್ನು ವಾಪಸ್‌ ಕರೆಯಿಸಿಕೊಂಡಿವೆ.

ಗಡಿಭಾಗದಿಂದ 10,865 ಕುಟುಂಬಗಳ 37,635 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಾಂಬೋಡಿಯಾದ ಮಾಹಿತಿ ಸಚಿವ ನೇತ್‌ ಪೆಕ್ಟ್ರಾ ಹೇಳಿದ್ದಾರೆ. ಗಡಿ ಭಾಗದ ಗ್ರಾಮಗಳಲ್ಲಿ 1.31 ಲಕ್ಷದಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂದು ಥಾಯ್ಲೆಂಡ್‌ ಹೇಳಿದೆ. ಸುರಕ್ಷತಾ ದೃಷ್ಟಿಯಿಂದ ಥಾಯ್ಲೆಂಡ್‌ ಸರ್ಕಾರ ಶನಿವಾರ ಗಡಿ ಭಾಗದ 852 ಶಾಲೆಗಳನ್ನು ಮತ್ತು ಏಳು ಆಸ್ಪತ್ರೆಗಳನ್ನು ಮುಚ್ಚಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...