ಪ್ರತಿಭಟನಾಕಾರರನ್ನು ಗಲ್ಲಿಗೇರಿಸಿದರೆ ಕಠಿಣ ಕ್ರಮ: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

Date:

ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಾಗಿ ಇರಾನ್ ಎಚ್ಚರಿಕೆ ಬೆನ್ನಲ್ಲೇ, ಹಾಗೇನಾದರೂ ಮಾಡಿದರೆ ಅತ್ಯಂತ ಕಠಿಣ ಕ್ರಮ ಜರುಗಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.

ಅಮೆರಿಕದ ಈ ಬೆದರಿಕೆಯು ಮಿಲಿಟರಿ ಮಧ್ಯಪ್ರವೇಶದ ಮುನ್ಸೂಚನೆಯಾಗಿದೆ ಎಂದು ಇರಾನ್ ಹೇಳಿದೆ.

ಇರಾನ್‌ನ ಸರ್ವೋಚ್ಛ ನಾಯಕರ ವಿರುದ್ಧದ ಇದುವರೆಗಿನ ಅತಿದೊಡ್ಡ ಸವಾಲುಗಳಲ್ಲಿ ಒಂದಾಗಿರುವ ಪ್ರತಿಭಟನೆಗಳ ಸಮಯದಲ್ಲಿ ಸಾವಿರಾರು ಜನರನ್ನು ಕೊಲ್ಲಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರರ ಕಳವಳಗಳ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಇರಾನ್‌ನ ವಿಶ್ವಸಂಸ್ಥೆಯ ಮಿಷನ್ ಎಕ್ಸ್‌ನಲ್ಲಿ ಹೇಳಿಕೆಯೊಂದನ್ನು ಪೋಸ್ಟ್ ಮಾಡಿದ್ದು, ಅಮೆರಿಕ ‘ಪ್ಲೇಬುಕ್”’ಮತ್ತೆ ವಿಫಲಗೊಳ್ಳುತ್ತದೆ ಎಂದು ಪ್ರತಿಜ್ಞೆ ಮಾಡಿದೆ.

‘ಇರಾನ್ ಕುರಿತಾದ ಅಮೆರಿಕದ ನಡೆಯು ನಾಯಕತ್ವ ಬದಲಾವಣೆಯ ಉದ್ದೇಶ ಹೊಂದಿದೆ. ಇರಾನ್ ಮೇಲಿನ ನಿರ್ಬಂಧಗಳು, ಬೆದರಿಕೆಗಳು, ಯೋಜಿತ ಅಶಾಂತಿ ಸೃಷ್ಟಿಸಿರುವುದು ಮತ್ತು ಅವ್ಯವಸ್ಥೆಯು ಮಿಲಿಟರಿ ಹಸ್ತಕ್ಷೇಪಕ್ಕೆ ನೆಪ ಹುಡುಕುವ ಕಾರ್ಯ ವಿಧಾನವಾಗಿದೆ’ಎಂದು ಪೋಸ್ಟ್ ಹೇಳಿದೆ.

ದೇಶದಾದ್ಯಂತ ನಡೆದ ಸಾಮೂಹಿಕ ಪ್ರತಿಭಟನೆಗಳ ನಂತರ ಗುರುವಾರದಿಂದ ಇರಾನ್ ಅಧಿಕಾರಿಗಳು ದೇಶದ ಮೇಲೆ ಮತ್ತೆ ಹಿಡಿತ ಸಾಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?

ಸರ್ಕಾರವು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದೆ. ಐದು ದಿನಗಳಿಂದ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸುವ ಮೂಲಕ ಪ್ರತಿಭಟನೆಯನ್ನು ಮತ್ತೆ ಹತ್ತಿಕ್ಕಿದೆ ಎಂದು ವರದಿಯಾಗಿದೆ.

ಸಹಾಯ ಸಿಗಲಿದೆ ಎಂದು ಇರಾನ್‌ನ ಪ್ರತಿಭಟನಾಕಾರರಿಗೆ ಈ ಹಿಂದೆ ಟ್ರಂಪ್ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಪ್ರತಿಭಟನೆ ಸಮಯದಲ್ಲಿ ಬಂಧಿಸಲಾದ ಕೆಲವರನ್ನು ದೇಶದ್ರೋಹದ ಆರೋಪದಡಿ ಗಲ್ಲಿಗೇರಿಸಲು ಇರಾನ್ ಸರ್ಕಾರ ಮುಂದಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, ಪ್ರತಿಭಟನಾಕಾರರನ್ನು ಗಲ್ಲಿಗೇರಿಸಲು ಮುಂದಾದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಹಿಂದೆ ಪ್ರತಿಭಟನಾಕಾರರಿಗೆ ಗುಂಡಿಕ್ಕಿ ಕೊಂದಿರಿ. ಈಗ ಗಲ್ಲಿಗೇರಿಸಲು ಮುಂದಾಗಿದ್ದೀರಿ. ಅದು ಹೇಗೆ ನಡೆಯುತ್ತದೆ ನೋಡೋಣ ಎಂದು ಗುಡುಗಿದ್ದಾರೆ.

ಈ ನಡುವೆ, ಇರಾನಿನ ರಾಜಧಾನಿಯ ದಕ್ಷಿಣ ಭಾಗದ ಕಹ್ರಿಜಾಕ್ ಶವಾಗಾರದಲ್ಲಿ ಸಾಲು ಸಾಲು ಶವಗಳು ಕಂಡುಬಂದಿದ್ದು, ಕಪ್ಪು ಚೀಲಗಳಲ್ಲಿ ಅವುಗಳನ್ನು ಸುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಕಂಡುಬಂದಿದೆ. ಕೆಲ ಜನರು ಗೋಗರೆಯುತ್ತಾ ತಮ್ಮ ಪ್ರೀತಿಪಾತ್ರರನ್ನು ಹುಡುಕುತ್ತಿರುವುದನ್ನೂ ಕಾಣಬಹುದಾಗಿದೆ.

ಮಂಗಳವಾರದಿಂದ ಇರಾನ್‌ನಲ್ಲಿ ಅಂತಾರಾಷ್ಟ್ರೀಯ ದೂರವಾಣಿ ಸಂಪರ್ಕಗಳನ್ನು ಪುನಃಸ್ಥಾಪಿಸಲಾಗಿದ್ದು, ಹೊರಹೋಗುವ ಕರೆಗಳಿಗೆ ಮಾತ್ರ ನಿರ್ಬಂಧವಿದೆ.

ಕನಿಷ್ಠ 12,000 ಜನರು ಸಾವು

ಇರಾನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕನಿಷ್ಠ 12,000 ಜನರು ಸಾವನ್ನಪ್ಪಿದ್ದಾರೆ, ಇದು ದೇಶದ ಸಮಕಾಲೀನ ಇತಿಹಾಸದಲ್ಲಿಯೇ ಅತಿ ದೊಡ್ಡ ಹತ್ಯೆಯಾಗಿದ್ದು, ಇದರಲ್ಲಿ ಹೆಚ್ಚಿನವು ಜನವರಿ 8 ಮತ್ತು 9 ರಂದು ನಡೆಯುತ್ತಿರುವ ಇಂಟರ್ನೆಟ್ ಸ್ಥಗಿತದ ಸಮಯದಲ್ಲಿ ನಡೆದವು ಎಂದು ಭದ್ರತಾ ಮೂಲಗಳು ಇರಾನ್ ಇಂಟರ್‌ನ್ಯಾಷನಲ್‌ಗೆ ತಿಳಿಸಿವೆ.

ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್ ಮತ್ತು ಅಧ್ಯಕ್ಷೀಯ ಕಚೇರಿ ಸೇರಿದಂತೆ ವಿಶ್ವಾಸಾರ್ಹ ಮೂಲಗಳಿಂದ ಪಡೆದ ಮಾಹಿತಿಯನ್ನು ಪರಿಶೀಲಿಸಿದ ನಂತರ, ಇಸ್ಲಾಮಿಕ್ ಗಣರಾಜ್ಯದ ಭದ್ರತಾ ಸಂಸ್ಥೆಗಳ ಆರಂಭಿಕ ಅಂದಾಜಿನ ಪ್ರಕಾರ ಕನಿಷ್ಠ 12,000 ಜನರು ಸಾವನ್ನಪ್ಪಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...