ರಷ್ಯಾ ಭೂಕಂಪದ ಪರಿಣಾಮ:‌ ಅಲಾಸ್ಕಾ, ಹವಾಯಿ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ ಸುನಾಮಿ

Date:

ಪೂರ್ವ ರಷ್ಯಾದ ಕಮ್ಚಟ್ಕಾ ಕರಾವಳಿ ಪ್ರದೇಶದಲ್ಲಿ ಸಂಭವಿಸಿದ 8.8 ತೀವ್ರತೆಯ ಭಾರೀ ಭೂಕಂಪನದಿಂದಾಗಿ ಹವಾಯಿ ಕರಾವಳಿಯಲ್ಲಿ ಹತ್ತು ಅಡಿಗೂ ಎತ್ತರದ ಸುನಾಮಿ ಅಲೆಗಳು ಬಂದಪ್ಪಳಿಸಲಿದೆ ಎಂದು ವರದಿ ತಿಳಿಸಿದೆ.

ರಷ್ಯಾದ ಕಮ್ಚಟ್ಕಾ ದ್ವೀಪದಲ್ಲಿ ಸಂಭವಿಸಿದ ಭೂಕಂಪನದಿಂದಾಗಿ ಜಪಾನ್‌, ಅಮೆರಿಕ, ಹವಾಯಿ ಸೇರಿದಂತೆ ವಿವಿಧ ದೇಶಗಳಲ್ಲಿ ಅಧಿಕಾರಿಗಳು ಸುನಾಮಿ ಎಚ್ಚರಿಕೆಯನ್ನು ಘೋಷಿಸಿದ್ದಾರೆ.

ಈಗಾಗಲೇ ಕ್ಯಾಲಿಫೋರ್ನಿಯಾ, ಅಲಾಸ್ಕಾ ಕರಾವಳಿ ಪ್ರದೇಶದಲ್ಲಿ ಸುನಾಮಿ ಅಲೆಗಳು ಅಪ್ಪಳಿಸಿರುವುದಾಗಿ ವರದಿ ವಿವರಿಸಿದೆ. ಕರಾವಳಿ ಪ್ರದೇಶದಲ್ಲಿ ಈಗಾಗಲೇ ಸುನಾಮಿ ಅಲೆಗಳು ಅಬ್ಬರಿಸತೊಡಗಿರುವುದಾಗಿ ದಿ ಪೆಸಿಫಿಕ್‌ ಸುನಾಮಿ ವಾರ್ನಿಂಗ್‌ ಸೆಂಟರ್‌ ಖಚಿತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹವಾಯಿ, ಅಲಾಸ್ಕಾ, ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ರಾಷ್ಟ್ರೀಯ ಹವಾಮಾನ ಇಲಾಖೆ ಮತ್ತು ಸ್ಥಳೀಯ ಏಜೆನ್ಸಿಗಳ ನಿಕಟ ಸಂಪರ್ಕದೊಂದಿಗೆ ಸೂಕ್ಷ್ಮವಾಗಿ ಪರಿಶೀಲಿಸುತ್ತಿರುವುದಾಗಿ ವರದಿ ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಸುನಾಮಿಯಿಂದ ಇಲ್ಲಿಯವರೆಗೂ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಭಾರೀ ಗಾತ್ರದ ಅಲೆಗಳು ಹಾಗೂ ಸಂಭಾವ್ಯ ಪ್ರವಾಹ ಸ್ಥಿತಿ ಮುಂದುವರಿಯುವ ಸಾಧ್ಯತೆ ನಿಟ್ಟಿನಲ್ಲಿ ಕರಾವಳಿ ಪ್ರದೇಶದಲ್ಲಿರುವ ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರಿಯುತ್ತಿದೆ ಎಂದು ಹವಾಯಿ ಗವರ್ನರ್‌ ಜೋಶ್‌ ಗ್ರೀನ್‌ ತಿಳಿಸಿದ್ದಾರೆ.

ಪ್ರವಾಸಿಗರು ಮತ್ತು ನಿವಾಸಿಗಳು ಬೀಚ್‌, ಹಾರ್ಬರ್‌ ಹಾಗೂ ಕರಾವಳಿಯ ತಗ್ಗು ಪ್ರದೇಶಗಳಿಗೆ ಭೇಟಿ ನೀಡದಂತೆ ಎಚ್ಚರಿಕೆ ನೀಡಿರುವುದಾಗಿ ಗವರ್ನರ್‌ ಗ್ರೀನ್‌ ತಿಳಿಸಿರುವುದಾಗಿ ವರದಿಯಾಗಿದೆ.

ಜಪಾನ್‌ನಲ್ಲಿ ಈಗಾಗಲೇ ಕರಾವಳಿ ಪ್ರದೇಶದಲ್ಲಿದ್ದ ಸುಮಾರು 2 ಮಿಲಿಯನ್‌ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...