ಪೆನ್ಸಿಲ್ವೇನಿಯಾದಲ್ಲಿ ಕಾರು ಅಪಘಾತ; ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

Date:

ಲ್ಯಾಂಕಾಸ್ಟರ್ ಕೌಂಟಿಯ ಪೆನ್ಸಿಲ್ವೇನಿಯಾ ಟರ್ನ್‌ಪೈಕ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಈ ವಿದ್ಯಾರ್ಥಿಗಳು ವಾಸವಿದ್ದರು ಎನ್ನಲಾಗಿದೆ.

ಮೃತ ವಿದ್ಯಾರ್ಥಿಗಳನ್ನು 23 ವರ್ಷದ ಸೌರವ್ ಪ್ರಭಾಕರ್ ಮತ್ತು 20 ವರ್ಷದ ಮಾನವ್ ಪಟೇಲ್ ಎಂದು ಗುರುತಿಸಲಾಗಿದೆ. ಮೇ 10ರ ಶನಿವಾರ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಮೃತರ ಗುರುತನ್ನು ಲ್ಯಾಂಕಾಸ್ಟರ್ ಕೌಂಟಿ ಕರೋನರ್ ಕಚೇರಿ ದೃಢಪಡಿಸಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಹಾಗೆಯೇ ಆಕಸ್ಮಿಕ ಸಾವು ಎಂದು ಪರಿಗಣಿಸಲಾಗಿದೆ.

ಇದನ್ನು ಓದಿದ್ದೀರಾ? ವೀಸಾ ರದ್ದು | ಅಮೆರಿಕದಿಂದ ಸ್ವಯಂ ಗಡಿಪಾರಾದ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್ ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೆನ್ಸಿಲ್ವೇನಿಯಾ ರಾಜ್ಯ ಪೊಲೀಸ್ (ಪಿಎಸ್‌ಪಿ), “ವಾಹನವು ರಸ್ತೆಯನ್ನು ಬಿಟ್ಟು ಮರಕ್ಕೆ ಡಿಕ್ಕಿ ಹೊಡೆದು ಸೇತುವೆಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಧಾವಿಸಿದ ತುರ್ತು ಸಿಬ್ಬಂದಿಗಳು ಪರಿಶೀಲಿಸಿದಾಗ ಚಾಲಕ ಮತ್ತು ಹಿಂಭಾಗದ ಪ್ರಯಾಣಿಕರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಮುಂಭಾಗ ಕುಳಿತಿದ್ದ ಪ್ರಯಾಣಿಕರೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರೀಡಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ” ಎಂದು ಹೇಳಿದ್ದಾರೆ.

ಅಪಘಾತದ ಸ್ಥಳವು ಮುಖ್ಯ ರಸ್ತೆಯಿಂದ ಸಂಪೂರ್ಣವಾಗಿ ಹೊರಗಿದೆ. ಆದ್ದರಿಂದಾಗಿ ಸಂಚಾರಕ್ಕೆ ವ್ಯತ್ಯಯವಾಗಿಲ್ಲ. ಪಿಎಸ್‌ಪಿಯ ವಿಧಿವಿಜ್ಞಾನ ಸೇವಾ ಘಟಕವು ತನಿಖೆಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಇಬ್ಬರು ಭಾರತೀಯರ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳು ಕ್ಲೀವ್‌ಲ್ಯಾಂಡ್ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ದಾಖಲಾಗಿದ್ದರು ಎಂದು ಹೇಳಿದೆ.

“ಇಬ್ಬರು ಭಾರತೀಯ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ದುರದೃಷ್ಟಕರ ರಸ್ತೆ ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಇಂತಹ ಸಂದರ್ಭದಲ್ಲಿ ನಾವು ಅವರ ಕುಟುಂಬದೊಂದಿಗೆ ಇದ್ದೇವೆ. ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ಸಹಾಯ ಮಾಡಲಾಗುವುದು” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...