ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಹತ್ಯೆ ಪ್ರಕರಣ, ಇಬ್ಬರು ಭಾರತೀಯರ ಬಂಧನ

Date:

ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಾರತೀಯರ ಬಂಧನ ಮಾಡಲಾಗಿದೆ. ಇಬ್ಬರು ಸಹೋದರರಾಗಿದ್ದು ಹರಿಯಾಣ ಮೂಲದವರಾಗಿದ್ದಾರೆ.

ಎರಡು ದಿನಗಳ ಹಿಂದೆ ಮೆಲ್ಬೋರ್ನ್‌ನ ಒರ್ಮಂಡ್‌ನಲ್ಲಿ ನವಜೀತ್ ಸಂಧು ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಎನ್‌ಎಸ್‌ಡಬ್ಲ್ಯೂ ಪೊಲೀಸರ ನೆರವಿನೊಂದಿಗೆ ನ್ಯೂ ಸೌತ್ ವೇಲ್ಸ್‌ನ ಗೌಲ್ಬರ್ನ್‌ನಲ್ಲಿರುವ ಅಭಿಜೀತ್ (26) ಮತ್ತು ರಾಬಿನ್ ಗಾರ್ಟನ್‌ನನ್ನು (27) ಬಂಧಿಸಲಾಗಿದೆ ಎಂದು ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿಯ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮೃತ ವಿದ್ಯಾರ್ಥಿ ಮತ್ತು ಆರೋಪಿಗಳು ಹರಿಯಾಣದ ಕರ್ನಾಲ್ ನಿವಾಸಿಗಳಾಗಿದ್ದಾರೆ. ಭಾರತೀಯ ವಿದ್ಯಾರ್ಥಿಗಳ ನಡುವೆ ಬಾಡಿಗೆ ಸಂಬಂಧಿತ ವಾಗ್ವಾದ ನಡೆಯುತ್ತಿದ್ದಾಗ ಜಗಳ ನಿಲ್ಲಿಸಲು ಮಧ್ಯಪ್ರವೇಶ ಮಾಡಿದ ಸಂದರ್ಭದಲ್ಲಿ ನವಜೀತ್ ಸಂಧುಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ನವಜೀತ್ ಅವರ 30 ವರ್ಷದ ಸ್ನೇಹಿತನಿಗೂ ಗಾಯಗಳಾಗಿವೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಯಶ್ವೀರ್ ತಿಳಿಸಿದ್ದಾರೆ.

“ನವಜೀತ್‌ನ ಬಳಿ ಕಾರು ಇತ್ತು, ಅವನ ಸ್ನೇಹಿತನ (ಮತ್ತೊಬ್ಬ ಭಾರತೀಯ ವಿದ್ಯಾರ್ಥಿ) ಮನೆಯಲ್ಲಿದ್ದ ಸಾಮಾಗ್ರಿಗಳನ್ನು ಕೊಂಡೊಯ್ಯಲು ಕಾರಿನಲ್ಲಿ ಸ್ನೇಹಿತನೊಂದಿಗೆ ಆತ ವಾಸವಿದ್ದ ಮನೆಯ ಕಡೆ ಹೋಗಿದ್ದ. ಸ್ನೇಹಿತ ಒಳಗೆ ಹೋದಾಗ, ನವಜೀತ್‌ಗೆ ಕೂಗಾಟ ಕೇಳಿಬಂದಿದೆ. ಗಲಾಟೆ ನೋಡಿ ಜಗಳ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭದಲ್ಲಿ ನವಜೀತ್ ಎದೆಗೆ ಚಾಕುವಿನಿಂದ ಮಾರಣಾಂತಿಕವಾಗಿ ಇರಿಯಲಾಗಿದೆ” ಎಂದು ಯಶ್ವಿರ್ ಹೇಳಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...