ಯುಕೆ ಚುನಾವಣೆ | ಕೀರ್ ಸ್ಟಾರ್‌ಮರ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Date:

ಯುಕೆ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್‌ಮರ್‌ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ, ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರಿಗೆ ಸಂದೇಶವನ್ನೂ ನೀಡಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷವು ಕನ್ಸರ್ವೇಟಿವ್‌ ಪಕ್ಷದ ವಿರುದ್ಧ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಒಟ್ಟು 650 ಸ್ಥಾನಗಳ ಪೈಕಿ ಆಡಳಿತದಲ್ಲಿದ್ದ ಕನ್ಸರ್ವೇಟಿವ್ ಪಕ್ಷ ಕೇವಲ 120 ಸ್ಥಾನಗಳನ್ನು ಗೆದಿದ್ದರೆ, ಲೇಬರ್ ಪಕ್ಷವು 412 ಸ್ಥಾನಗಳನ್ನು ಗೆದ್ದಿದೆ.

ಚುನಾವಣೆಯಲ್ಲಿ ಗೆದ್ದ ಲೇಬರ್ ಪಕ್ಷದ ಕೀರ್ ಸ್ಟಾರ್‌ಮರ್‌ ಅವರಿಗೆ ಶುಭ ಕೋರಿ ಟ್ವೀಟ್‌ ಮಾಡಿರುವ ಮೋದಿ, “ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಗಮನಾರ್ಹ ವಿಜಯ ಸಾಧಿಸಿದ ಕೀರ್ ಸ್ಟಾರ್‌ಮರ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಎಲ್ಲ ಕ್ಷೇತ್ರಗಳಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು, ಪರಸ್ಪರ ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಸಕಾರಾತ್ಮಕ ಮತ್ತು ರಚನಾತ್ಮಕ ಸಹಯೋಗವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಸುನಕ್ ಅವರದ್ದ ‘ಶ್ಲಾಘನೀಯ ನಾಯಕತ್ವ’ ಎಂದು ಪ್ರಶಂಸಿಸಿರುವ ಮೋದಿ, ಭಾರತ-ಯುಕೆ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಸುನಕ್ ಅವರ ಕೊಡುಗೆಗಳಿಗಾಗಿ ಧನ್ಯವಾದ ಅರ್ಪಿಸಿದ್ದಾರೆ.

“ಬ್ರಿಟನ್‌ನ ನಿಮ್ಮ ಶ್ಲಾಘನೀಯ ನಾಯಕತ್ವಕ್ಕಾಗಿ ರಿಶಿ ಸುನಕ್ ಅವರಿಗೆ ಧನ್ಯವಾದಗಳು. ನಿಮ್ಮ ಅಧಿಕಾರಾವಧಿಯಲ್ಲಿ ನಿಮ್ಮ ಸಕ್ರಿಯ ಕೊಡುಗೆಯಿಂದಾಗಿ ಭಾರತ ಮತ್ತು ಯುಕೆ ನಡುವಿನ ಸಂಬಂಧವು ಗಟ್ಟಿಗೊಂಡಿದೆ. ನಿಮ್ಮ ಮುಂದಿನ ಭವಿಷ್ಯಕ್ಕೆ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...