ಪತ್ನಿ ಜೊತೆ ತೆರಳುತ್ತಿದ್ದಾಗ ಏಕಾಏಕಿ ನಿಂತ ಎಸ್ಕಲೇಟರ್; ಗಾಬರಿಗೊಂಡ ಟ್ರಂಪ್!

Date:

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಪತ್ನಿ ಮೆಲಾನಿಯಾ ಟ್ರಂಪ್ ಜೊತೆ ವಿಶ್ವಸಂಸ್ಥೆಯ ಪ್ರಧಾನ ಕಚೇರಿಗೆ ಎಸ್ಕಲೇಟರ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ನಿಂತು ಗೊಂದಲ ಉಂಟಾಯಿತು. ಟ್ರಂಪ್‌ರ ಭಾಷಣಕ್ಕೂ ಕೆಲ ನಿಮಿಷಗಳ ಮುಂಚೆ ನಡೆದ ಈ ಘಟನೆಗೆ ಶ್ವೇತಭವನ ಆಕ್ರೋಶ ವ್ಯಕ್ತಪಡಿಸಿದೆ.

ಟ್ರಂಪ್ ಹಾಗೂ ಮೆಲಾನಿಯಾ ಎಸ್ಕಲೇಟರ್ ಹತ್ತಿದ ತಕ್ಷಣವೇ ಅದು ನಿಂತುಹೋಗಿದ್ದು, ಇಬ್ಬರೂ ಮೆಟ್ಟಿಲುಗಳ ಮೇಲೆಯೇ ನಡೆದು ಹೋಗಬೇಕಾಯಿತು.

ಬಳಿಕ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, “ಯಾರಾದರೂ ವಿಶ್ವಸಂಸ್ಥೆಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಎಸ್ಕಲೇಟರ್ ನಿಲ್ಲಿಸಿದ್ದರೆ, ಅವರನ್ನು ತಕ್ಷಣ ವಜಾ ಮಾಡಿ ತನಿಖೆ ನಡೆಸಬೇಕು” ಎಂದು ಬರೆದಿದ್ದಾರೆ. ಬ್ರಿಟಿಷ್ ದಿನಪತ್ರಿಕೆಯೊಂದರ ವರದಿ ಪ್ರಕಾರ, ಕೆಲವು ವಿಶ್ವಸಂಸ್ಥೆ ಸಿಬ್ಬಂದಿ ಟ್ರಂಪ್ ಬಂದಾಗ ಎಸ್ಕಲೇಟರ್ ಮತ್ತು ಲಿಫ್ಟ್ ನಿಲ್ಲಿಸುವ ಬಗ್ಗೆ ತಮಾಷೆ ಮಾಡಿದ್ದರು ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಿನೆಮಾ ಟಿಕೆಟ್ ದರಗಳಿಗೆ ಸರ್ಕಾರಿ ಕಡಿವಾಣದ ಸಂಗತಿಯೇನು?

ಆದರೆ ವಿಶ್ವಸಂಸ್ಥೆಯ ವಕ್ತಾರ ಸ್ಟೆಫಾನೆ ದುಜಾರಿಕ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಅವರ ಪ್ರಕಾರ, ಟ್ರಂಪ್ ತಂಡದ ಒಬ್ಬ ವೀಡಿಯೋಗ್ರಾಫರ್ ಎಸ್ಕಲೇಟರ್ ಮೇಲೆ ಮುಂಚಿತವಾಗಿ ಕಾಲಿಟ್ಟಾಗ, ಸುರಕ್ಷತಾ ವ್ಯವಸ್ಥೆಯ ಸಂವೇದಕ ಸಕ್ರಿಯಗೊಂಡು ಎಸ್ಕಲೇಟರ್ ಸ್ವಯಂಚಾಲಿತವಾಗಿ ನಿಂತಿತು. ಕೆಲ ನಿಮಿಷಗಳಲ್ಲಿ ಅದನ್ನು ಮರುಚಾಲನೆಗೊಳಿಸಲಾಯಿತು.

ಭಾಷಣದ ವೇಳೆ ಟ್ರಂಪ್ ಹಾಸ್ಯಮಾಡುತ್ತಾ, “ವಿಶ್ವಸಂಸ್ಥೆಯಿಂದ ನನಗೆ ಸಿಕ್ಕದ್ದು ಕೆಟ್ಟ ಎಸ್ಕಲೇಟರ್ ಮತ್ತು ಕೆಟ್ಟ ಟೆಲಿಪ್ರಾಂಪ್ಟರ್ ಮಾತ್ರ” ಎಂದರು. “ಪತ್ನಿ ಆರೋಗ್ಯ ಸರಿಯಿಲ್ಲದಿದ್ದರೆ ಬೀಳುತ್ತಿದ್ದರು” ಎಂದು ಕೂಡ ಹಾಸ್ಯ ಮಾಡಿದರು.

ಘಟನೆ ರಾಜತಾಂತ್ರಿಕ ಚರ್ಚೆಗೆ ಕಾರಣವಾದರೂ, ವಿಶ್ವಸಂಸ್ಥೆ ತಾಂತ್ರಿಕ ದೋಷವಷ್ಟೇ ಸಂಭವಿಸಿತು ಎಂದು ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...