ಮುಂಬೈ ದಾಳಿ ಆರೋಪಿ ತಹಾವ್ವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ

Date:

  • ತಹಾವ್ವುರ್‌ ಆರೋಪಿಯನ್ನು ಕರೆತರಲು ಸಜ್ಜಾಗಿರುವುದಾಗಿ ಹೇಳಿದ್ದ ಎನ್‌ಐಎ
  • 2008ರಲ್ಲಿ ಮುಂಬೈ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 166 ಮಂದಿ ಸಾವು

ಮುಂಬೈ ದಾಳಿಗೆ ಕಾರಣವಾಗಿದ್ದ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವುರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಸ್ಥಳೀಯ ನ್ಯಾಯಾಲಯ ಸಮ್ಮತಿಸಿದೆ ಎಂದು ಮಾಧ್ಯಮಗಳು ಗುರುವಾರ (ಮೇ 18) ವರದಿ ಮಾಡಿವೆ.

ಮುಂಬೈ ದಾಳಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರಾಣಾನನ್ನು ತಮಗೆ ಹಸ್ತಾಂತರಿಸಬೇಕು ಎಂದು ಭಾರತ ಅಮೆರಿಕಕ್ಕೆ ಮನವಿ ಮಾಡಿತ್ತು. ತಹಾವ್ವುರ್‌ ರಾಣಾ ಆರೋಪಿಯನ್ನು ಮುಂಬೈ ದಾಳಿ ಪ್ರಕರಣದಲ್ಲಿ ಕಳೆದ ವರ್ಷ ಜೂನ್‌ 10 ರಂದು ಬಂಧಿಸಲಾಗಿತ್ತು. ಆದರೆ ರಾಣಾ ತಲೆಮರೆಸಿಕೊಂಡಿದ್ದಾನೆ ಎಂದು ಭಾರತ ಘೋಷಿಸಿತ್ತು.

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿರುವ ಡಿಸ್ಟ್ರಿಕ್ಟ್‌ ಕೋರ್ಟ್‌ನಲ್ಲಿ 2021ರ ಜೂನ್‌ನಲ್ಲಿ ಕಡೆಯದಾಗಿ ಈ ಪ್ರಕರಣದ ವಿಚಾರಣೆ ನಡೆದಿತ್ತು. ರಾಣಾನನ್ನು ಭಾರತಕ್ಕೆ ನೀಡಬೇಕು ಎಂದು ಅಮೆರಿಕ ಸರ್ಕಾರ ಮನವಿ ಮಾಡಿತ್ತು. ಕೋರ್ಟ್‌ ಈ ಸಂಬಂಧ ವಿಚಾರಣೆ ನಡೆಸಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ತಹಾವ್ವುರ್‌ ಆರೋಪಿಯನ್ನು ಈಗ ಭಾರತಕ್ಕೆ ಹಸ್ತಾಂತರಿಸಲು ಅನುಮತಿ ನೀಡಿ ಕೋರ್ಟ್‌ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾಸ್‌ ಏಂಜಲೀಸ್‌ನ ದಕ್ಷಿಣ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಜಾಕ್ವೆಲಿನ್‌ ಚೂಲಿಜಿಯನ್‌ ಅವರು 62 ವರ್ಷದ ರಾಣಾನನ್ನು ಭಾರತ ಹಸ್ತಾಂತರಕ್ಕೆ ಅನುಮತಿ ನೀಡಿ ಮೇ 16ಕ್ಕೆ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ. ರಾಣಾ ಪರ ವಕೀಲರು ಭಾರತಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿದರು.

2008ರ ನವೆಂಬರ್‌ 26 ರಂದು ಮುಂಬೈನಲ್ಲಿ ಲಷ್ಕರ್‌-ಎ-ತಯ್ಯಬಾ ಭಯೋತ್ಪಾದಕ ಸಂಘಟನೆಯ 10 ಮಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಅಮೆರಿಕದ ಆರು ಮಂದಿ ಸೇರಿ 166 ಜನ ಮೃತಪಟ್ಟಿದ್ದರು. ಈ ವೇಳೆ ಮುಂಬೈನ ತಾಜ್‌ ಹೋಟೆಲ್‌ಗೆ ಭಯೋತ್ಪಾದಕರು ಮುತ್ತಿಗೆ 60 ಗಂಟೆಗಳಿಗೂ ಹೆಚ್ಚು ಕಾಲ ವಶಪಡಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಲೇಡಿ ಸಿಂಘಂ ಖ್ಯಾತಿಯ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಸಾವು

ಈ ದಾಳಿ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ನಡೆಸುತ್ತಿತ್ತು. ಭಯೋತ್ಪಾದಕ ದಾಳಿಗೆ ನಡೆದ ಚರ್ಚೆಗಳು, ನಡೆಸಿದ ಪಿತೂರಿಗಳಲ್ಲಿ ರಾಣಾ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ ಎಂದು ಎನ್‌ಐಎ ಹೇಳಿತ್ತು.

ತಹಾವ್ವುರ್‌ ರಾಣಾ ಆರೋಪಿಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕ ಭಾರತಕ್ಕೆ ಕರೆತರಲು ಸಿದ್ಧವಾಗಿರುವುದಾಗಿ ಎನ್‌ಐಎ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...