ಪ್ರಧಾನಿ ಮೋದಿ ರಷ್ಯಾ ಭೇಟಿ: ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಆಕ್ರೋಶ

Date:

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಮಾಸ್ಕೋ ಭೇಟಿಯ ಸಮಯದಲ್ಲಿ ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯದ ಮಾತುಕತೆಯ ಬಗ್ಗೆ ಜೋ ಬೈಡನ್ ನೇತೃತ್ವದ ಅಮೆರಿಕ ಆಡಳಿತದ ಹಲವು ಹಿರಿಯ ಅಧಿಕಾರಿಗಳನ್ನು ಕೆರಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ತಮ್ಮ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ರಷ್ಯಾವನ್ನು ಭಾರತದ “ಸಾರ್ವಕಾಲಿಕ ಸ್ನೇಹಿತ” ಎಂದು ಬಣ್ಣಿಸಿದರು. ಅಲ್ಲದೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದ ಮೋದಿ, ವ್ಲಾಡಿಮಿರ್‌ ಪುಟಿನ್‌ ಅವರ ಎರಡು ದಶಕದ ಆಡಳಿತದಲ್ಲಿಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಸದೃಢವಾಗಿದೆ ಎಂದು ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ವಾಷಿಂಗ್ಟನ್‌ನಲ್ಲಿ ಜುಲೈ 9 ರಿಂದ ಜುಲೈ 11 ರವರೆಗೂ ನಡೆದ ನ್ಯಾಟೋ ಶೃಂಗಸಭೆಯಲ್ಲಿ ನರೇಂದ್ರ ಮೋದಿ ರಷ್ಯಾ ಭೇಟಿ ಹಾಗೂ ಉಭಯ ನಾಯಕರ ಮಾತುಕತೆಗಳ ಬಗ್ಗೆ ಅಮೆರಿಕದ ಹಿರಿಯ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಕ್ರೇನ್ ಮೇಲೆ ಅಮೆರಿಕ ಆಕ್ರಮಣದ ನಂತರ ಪ್ರಧಾನಿ ಮೋದಿ ಅವರ ಮೊದಲ ರಷ್ಯಾ ಭೇಟಿ ಇದಾಗಿದ್ದು, ಅಮೆರಿಕಾ ಹಾಗೂ ಭಾರತದ ನಿಕಟ ಸಂಬಂಧಗಳ ಬಗ್ಗೆ ಅಮೆರಿಕದ ಸರ್ಕಾರದ ಒಳಗೆ ಮತ್ತು ಹೊರಗೆ ಟೀಕೆಗಳನ್ನು ಹುಟ್ಟುಹಾಕಿದೆ ಎಂದು ಅಮೆರಿಕದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಮೋದಿ ಭೇಟಿಯು ಜೋ ಬೈಡನ್ ಆಡಳಿತಕ್ಕೆ “ಕಷ್ಟಕರ ಮತ್ತು ಅನಾನುಕೂಲ” ಎಂದು ಅಮೆರಿಕ ಅಧಿಕಾರಿಗಳು ಒಪ್ಪಿಕೊಂಡಿದ್ದು, ಉಭಯ ದೇಶಗಳ ಸಂಬಂಧ ಮತ್ತಷ್ಟು ಸಂಕೀರ್ಣಗೊಳಿಸುತ್ತದೆ ಎಂದು ನವದೆಹಲಿಗೆ ತಿಳಿಸಲಾಗಿದೆ ಎಂದು ವರದಿ ಮಾಡಲಾಗಿದೆ.

ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಕೂಡ ಹಿಂದಿನ ದಿನ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪ್ರಧಾನಿ ಮೋದಿ-ಪುಟಿನ್ ಭೇಟಿಯನ್ನು ಪರೋಕ್ಷವಾಗಿ ಟೀಕಿಸಿದರು. ಭಾರತವು ಅಮೆರಿಕ ಸ್ನೇಹವನ್ನು ಉದಾಸೀನ ಮಾಡಬಾರದು ಎಂದು ಹೇಳಿದ್ದರು.

ಈ ನಡುವೆ, ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ನವದೆಹಲಿಗೆ ಎಚ್ಚರಿಕೆ ನೀಡಿದ್ದಾರೆ. “ಭಾರತವು ದೀರ್ಘಕಾಲದ, ವಿಶ್ವಾಸಾರ್ಹ ಪಾಲುದಾರರಾಗಿ ರಷ್ಯಾ ಮೇಲೆ ಅವಲಂಬಿತವಾಗುವುದು ಉತ್ತಮ ಬೆಳವಣಿಗೆಯಲ್ಲ. ರಷ್ಯಾವು ಚೀನಾಕ್ಕೆ ಹತ್ತಿರವಾಗುತ್ತಿದೆ. ಸಂಘರ್ಷದ ಸಂದರ್ಭದಲ್ಲಿ ಮಾಸ್ಕೋ ನವದೆಹಲಿಯ ವಿರುದ್ಧವಾಗಿ ಹಾಗೂ ಬೀಜಿಂಗ್‌ ಪರವಾಗಿ ನಿಲ್ಲುತ್ತದೆ. ಇತ್ತೀಚಿನ ವರ್ಷಗಳಲ್ಲಿ ಚೀನಾ ಆಕ್ರಮದ ಬಗ್ಗೆ ಪ್ರಧಾನಿ ಮೋದಿ ಸಹಜವಾಗಿ ಕಳವಳಗೊಂಡಿರುವುದನ್ನು ನಾವು ನೋಡಿದ್ದೇವೆ. ಚೀನಾದ ಆಕ್ರಮಣದ ಬಗ್ಗೆ ನಾವು ಭಾರತ ಸೇರಿದಂತೆ ವಿಶ್ವದ ಪ್ರತಿಯೊಂದು ದೇಶಕ್ಕೂ ತಿಳಿಸುತ್ತೇವೆ” ಎಂದು ಸುಲ್ಲಿವನ್ ಹೇಳಿದರು.

2022 ರಿಂದ ಆರಂಭವಾದ ಉಕ್ರೇನ್‌ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಇಲ್ಲಿಯವರೆಗೆ ಖಂಡಿಸಿಲ್ಲ. ಈ ಬಗ್ಗೆ ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಆಕ್ರೋಶ ವ್ಯಕ್ತಪಡಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...