ಗಾಝಾ ಪಟ್ಟಿ ಮರು ಆಕ್ರಮಿಸುವ ಇಸ್ರೇಲ್ ನಡೆಗೆ ಅಮೆರಿಕ ವಿರೋಧ

Date:

ಗಾಝಾ ಪಟ್ಟಿ ಮರು ಆಕ್ರಮಿಸಿಕೊಳ್ಳುವ ಇಸ್ರೇಲ್‌ ಸೇನೆಯ ನಡೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ವಿರೋಧ ವ್ಯಕ್ತಪಡಿಸಿದ್ದಾರೆ.

”ಇಸ್ರೇಲ್‌ ಸೇನಾ ಪಡೆಗಳು ಗಾಝಾ ಪಟ್ಟಿಯನ್ನು ಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕ್ರಮವಲ್ಲ ಎಂದು ಭಾವಿಸಿದ್ದಾರೆ” ಎಂದು ಶ್ವೇತ ಭವನದ ಭದ್ರತಾ ವಕ್ತಾರರಾದ ಜಾನ್‌ ಕಿರ್ಬೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಯುದ್ಧದ ನಂತರ ಗಾಝಾ ಪಟ್ಟಿಯನ್ನು ಅನಿರ್ದಿಷ್ಟ ಅವಧಿಗೆ ಭದ್ರತೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ ಒಂದು ದಿನದ ನಂತರ ಅಮೆರಿಕದಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ನಾವು ಭದ್ರತೆಯ ಜವಾಬ್ದಾರಿಯನ್ನು ಹೊಂದಿಲ್ಲದಿದ್ದಾಗ, ನಮಗೆ ಊಹಿಸಲು ಸಾಧ್ಯವಾಗದ ಪ್ರಮಾಣದಲ್ಲಿ ಹಮಾಸ್‌ನಿಂದ ಭಯೋತ್ಪಾದನೆಯ ಸ್ಫೋಟವಾಗಿದೆ” ಎಂದು ಬೆಂಜಮಿನ್ ನೆತನ್ಯಾಹು ಹೇಳಿದ್ದರು.

“ಘರ್ಷಣೆಯ ನಂತರದ ಗಾಜಾ ಹೇಗಿರುತ್ತದೆ ಮತ್ತು ಆಡಳಿತ ಹೇಗಿರಬೇಕು ಎಂಬುದರ ಕುರಿತು ಆರೋಗ್ಯಕರ ಸಂಭಾಷಣೆಗಳ ಅಗತ್ಯವಿದೆ” ಎಂದು ಕಿರ್ಬೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಸಹಪಾಠಿಗಳಿಂದ ಹಲ್ಲೆ, ಜಾತಿ ನಿಂದನೆ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಇಸ್ರೇಲ್ ಗಾಜಾವನ್ನು ವಶಪಡಿಸಿಕೊಳ್ಳುವುದು “ತಪ್ಪು” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಈ ಹಿಂದೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಅಮೆರಿಕದಲ್ಲಿನ ಇಸ್ರೇಲಿ ರಾಯಭಾರಿ ಮೈಕೆಲ್ ಹೆರ್ಜೋಗ್, ಇಸ್ರೇಲ್ ಸಂಘರ್ಷ ಕೊನೆಗೊಂಡ ನಂತರ ಗಾಜಾವನ್ನು ವಶಪಡಿಸಿಕೊಳ್ಳಲು ಉದ್ದೇಶಿಸುವುದಿಲ್ಲ ಎಂದು ಹೇಳಿದ್ದರು.

ಗಾಜಾವನ್ನು ಈಗಾಗಲೇ ಆಕ್ರಮಿತ ಪ್ರದೇಶವೆಂದು ಪರಿಗಣಿಸಲಾಗಿದೆ. ಏಕೆಂದರೆ ಇಸ್ರೇಲ್ ಪಡೆಗಳು ಔಪಚಾರಿಕವಾಗಿ 2005 ರಲ್ಲಿ ಗಾಝಾ ಪ್ರದೇಶದಿಂದ ಹಿಂತೆಗೆದುಕೊಂಡಿದ್ದರೂ ಸಹ ತನ್ನ ಗಡಿಗಳು, ವಾಯುಪ್ರದೇಶ ಮತ್ತು ಪ್ರಾದೇಶಿಕ ಪ್ರದೇಶಗಳಲ್ಲಿ ಸಂಪೂರ್ಣ ನಿಯಂತ್ರಣವನ್ನು ಹೊಂದಿದೆ. 1967 ರ ಯುದ್ಧದಲ್ಲಿ ಇತರ ಪ್ಯಾಲೇಸ್ತೀನಿಯನ್ ಪ್ರದೇಶಗಳೊಂದಿಗೆ ಪೂರ್ವ ಜೆರುಸಲೆಮ್ ಮತ್ತು ವೆಸ್ಟ್ ಬ್ಯಾಂಕ್ ಅನ್ನು ಇಸ್ರೇಲ್ ಆಕ್ರಮಿಸಿಕೊಂಡಿದೆ.

ಪ್ಯಾಲೇಸ್ತೀನಿಯನ್ ಆರೋಗ್ಯ ಅಧಿಕಾರಿಗಳ ಪ್ರಕಾರ ಗಾಜಾದ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ 4,237 ಮಕ್ಕಳು ಸೇರಿದಂತೆ ಕನಿಷ್ಠ 10,328 ಜನರು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ಎರಡೂ ಕದನ ವಿರಾಮಕ್ಕಾಗಿ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಒತ್ತಡವನ್ನು ನಿರಾಕರಿಸಿವೆ. ಹಮಾಸ್ ಒತ್ತೆಯಾಳುಗಳನ್ನು ಮೊದಲು ಬಿಡುಗಡೆ ಮಾಡಬೇಕು ಎಂದು ಇಸ್ರೇಲ್ ಹೇಳಿದೆ. ಗಾಜಾ ಆಕ್ರಮಣಕ್ಕೆ ಒಳಗಾಗಿರುವಾಗ ಅವರನ್ನು ಬಿಡುಗಡೆಗೊಳಿಸುವುದಿಲ್ಲ ಅಥವಾ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹಮಾಸ್ ಪ್ರತಿಪಾದಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...