ವೆನೆಜುವೆಲಾ ಬೆಳವಣಿಗೆಗಳ ಬಗ್ಗೆ ಭಾರತ ತೀವ್ರ ಕಳವಳ; ಶಾಂತಿ ಸ್ಥಾಪನೆಗೆ ಜೈಶಂಕರ್ ಆಗ್ರಹ

Date:

ವೆನೆಜುವೆಲಾದಲ್ಲಿ ಅಮೆರಿಕ ನಡೆಸಿದ ಮಿಲಿಟರಿ ಕಾರ್ಯಾಚರಣೆ ಮತ್ತು ಅಧ್ಯಕ್ಷ ನಿಕೋಲಸ್ ಮಡುರೊ ಅವರ ಬಂಧನದ ನಂತರ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಲ್ಲಿನ ಜನರ ಸುರಕ್ಷತೆಯೇ ನಮ್ಮ ಪ್ರಮುಖ ಆದ್ಯತೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರತಿಪಾದಿಸಿದ್ದಾರೆ.

​ಮಂಗಳವಾರ ಲಕ್ಸೆಂಬರ್ಗ್‌ನಲ್ಲಿ ಮಾತನಾಡಿದ ಅವರು, ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಎಲ್ಲ ಪಕ್ಷಗಳು ಒಂದೆಡೆ ಕುಳಿತು ಮಾತುಕತೆ ನಡೆಸುವ ಮೂಲಕ ಶಾಂತಿ ಸ್ಥಾಪಿಸಬೇಕು. ವೆನೆಜುವೆಲಾ ಜನರ ಹಿತಾಸಕ್ತಿಯನ್ನು ಕಾಪಾಡುವಂತಹ ನಿರ್ಧಾರಕ್ಕೆ ಬರಬೇಕು ಎಂದು ಒತ್ತಾಯಿಸಿದರು.

​”ವೆನೆಜುವೆಲಾದಲ್ಲಿನ ಬೆಳವಣಿಗೆಗಳ ಬಗ್ಗೆ ನಾವು ಈಗಾಗಲೇ ಹೇಳಿಕೆ ನೀಡಿದ್ದೇವೆ. ಅಲ್ಲಿ ನಡೆಯುತ್ತಿರುವ ಘಟನೆಗಳು ಸಹಜವಾಗಿಯೇ ಕಳವಳಕಾರಿಯಾಗಿವೆ. ಅಂತಿಮವಾಗಿ ಜನರ ಸುರಕ್ಷತೆ ಮುಖ್ಯವಾಗಿದ್ದು, ಸಂಬಂಧಪಟ್ಟವರು ಮಾತುಕತೆಯ ಮೂಲಕ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು,” ಎಂದು ಜೈಶಂಕರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ವೆನೆಜುವೆಲಾ ಜತೆ ಭಾರತ ಹಲವು ವರ್ಷಗಳಿಂದ ಉತ್ತಮ ಬಾಂಧವ್ಯ ಹೊಂದಿದೆ ಎಂದು ಸ್ಮರಿಸಿದ ಅವರು, “ಘಟನೆಗಳು ಯಾವುದೇ ತಿರುವು ಪಡೆದರೂ, ಅಲ್ಲಿನ ಜನರು ಸಂಕಷ್ಟದಿಂದ ಪಾರಾಗಬೇಕು ಎಂಬುದೇ ನಮ್ಮ ಬಯಕೆ,” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ವೆನೆಜುವೆಲಾ ಸಾರ್ವಭೌಮತೆಯ ಮೇಲೆ ಅಮೆರಿಕದ ‘ದರೋಡೆಕೋರ’ ದಾಳಿ: ಪ್ರಜಾಪ್ರಭುತ್ವದ ಮುಖವಾಡದಲ್ಲಿ ಸಂಪನ್ಮೂಲಗಳ ಲೂಟಿ

ಶನಿವಾರವಷ್ಟೇ ವೆನೆಜುವೆಲಾ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆಗಳು ಮತ್ತು ಕಾನೂನು ಜಾರಿ ಏಜೆನ್ಸಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆಹಿಡಿದು ದೇಶದಿಂದ ಹೊರಗೆ ಕರೆದೊಯ್ಯಲಾಗಿತ್ತು. ಈ ಹಠಾತ್ ಬೆಳವಣಿಗೆಯಿಂದಾಗಿ ಆ ದೇಶದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

​ಈ ಬೆಳವಣಿಗೆಯ ಬೆನ್ನಲ್ಲೇ ಹೇಳಿಕೆ ಬಿಡುಗಡೆ ಮಾಡಿರುವ ಭಾರತದ ವಿದೇಶಾಂಗ ಸಚಿವಾಲಯ, “ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ತೀವ್ರ ಕಳವಳಕಾರಿ ವಿಷಯವಾಗಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ,” ಎಂದು ತಿಳಿಸಿದೆ.

​ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲ ಪಕ್ಷಗಳು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಭಾರತ ಕರೆ ನೀಡಿದೆ. ಅಲ್ಲದೆ, ಕ್ಯಾರಕಾಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲ ನೆರವು ನೀಡಲಿದೆ ಎಂದು ಸಚಿವಾಲಯ ಭರವಸೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...