17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಸೌದಿ ಅರೇಬಿಯಾದಲ್ಲಿ ಚಾಲನೆ | ಸಾಹಿತ್ಯವು ಸಮಾಜನ್ನು ನೋಡುವ ಕಿಟಕಿ: ಯು.ಟಿ. ಖಾದರ್‌

Date:

ಸಾಹಿತ್ಯವು ಸಮಾಜದ ಆಗು ಹೋಗುಗಳನ್ನು ನೋಡುವ ಕಿಟಕಿ. ಆದ್ದರಿಂದಲೇ ಸಾಹಿತಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಾರೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದರು.

ಹಿರಿಯ ಸಾಹಿತಿ ಪ್ರೊ. ಎಸ್.‌ ಜಿ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿ ನಡೆಯುತ್ತಿರುವ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಗಿಡಗಳಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕನ್ನಡದ ಸಂಸ್ಕೃತಿಯ ಬೇರುಗಳು ಗಟ್ಟಿಯಾಗಿವೆ. ಆದ್ದರಿಂದಲೇ ಕನ್ನಡ ಸಂಸ್ಕೃತಿ, ಸಾಹಿತ್ಯಿಕ ಕಾರ್ಯಕ್ರಮಗಳು ಎಲ್ಲಿ ನಡೆದರೂ ಯಶಸ್ವಿಯಾಗುತ್ತವೆ ಎಂದು ತಿಳಿಸಿದ ಯು.ಟಿ. ಖಾದರ್, ಅನಿವಾಸಿ ಕನ್ನಡಿಗರು ಸೌದಿ ಅರೇಬಿಯಾದಲ್ಲಿ ಮೊದಲ ಬಾರಿಗೆ ಹಮ್ಮಿಕೊಂಡ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದ ಯಶಸ್ವಿಗೆ ಶುಭ ಹಾರೈಸಿ, ಸಂಘಟಕರನ್ನು ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭವಿಷ್ಯದ ಪೀಳಿಗೆಯಾದ ಮಕ್ಕಳಲ್ಲಿ ಸಾಹಿತ್ಯಾಭಿರುಚಿಯನ್ನು ಮೂಡಿಸುವ, ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಬೇಕಾದ ಅಗತ್ಯವಿದೆ ಎಂದು ಸ್ಪೀಕರ್ ಹೇಳಿದರು.

ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್‌ ಕುಮಾರ್‌ ಬಜಾಲ್‌ ಸ್ವಾಗತಿಸಿದರು. ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2004ರ ಸ್ಥಾಪಕ ಅಧ್ಯಕ್ಷ ಕೆ.ಪಿ. ಮಂಜುನಾಥ್‌ ಸಾಗರ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಬೆಂಗಳೂರಿನ ಗೋನಾ ಸ್ವಾಮಿ ಮತ್ತು ಬಳಗ ನಾಡಗೀತೆ ಹಾಡಿದರು. ಫಿರೋಝ್‌ ಕಲ್ಲಡ್ಕ ಮನವಿ ವಾಚಿಸಿದರು. ಸಾಹಿಲ್‌ ಝಹೀರ್‌, ಡಾ. ಭವಾನಿ ನಿತಿನ್‌ ರಾವ್‌ ಮತ್ತು ನಾಗರಾಜ್‌ ಬಜಾಲ್ ಕಾರ್ಯಕ್ರಮ ನಿರೂಪಿಸಿದರು.

ಸಚಿವ ರಹೀಮ್‌ ಖಾನ್‌, ಕರ್ನಾಟಕ ಸರಕಾರದ ಅನಿವಾಸಿ ಕನ್ನಡಿಗರ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಶಾಸಕ ಅಶೋಕ್‌ ರೈ, ಕಾಂಗ್ರೆಸ್‌ ಮುಖಂಡ ಪದ್ಮರಾಜ್‌ ಆರ್.‌, ಡಾ. ಯು.ಟಿ. ಇಫ್ತಿಕಾರ್‌, ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಝಕರಿಯಾ ಜೋಕಟ್ಟೆ ಮತ್ತು ಶೇಖ್‌ ಕರ್ನೀರೆ, ಅಧ್ಯಕ್ಷ ಸತೀಶ್‌ ಕುಮಾರ್‌ ಬಜಾಲ್‌, ಪ್ರಧಾನ ಕಾರ್ಯದರ್ಶಿ ರಫೀಕ್‌ ಸೂರಿಂಜೆ, ಯೋಗೀಶ್ ಪೂಜಾರಿ ಮುಹಮ್ಮದ್‌ ಶರೀಫ್‌ ಬೋಳಾರ್‌, ಮುಹಮ್ಮದ್‌ ಅಶ್ರಫ್‌ ಕರ್ನೀರೆ, ಸುದೀಶ್‌ ಹೆಗ್ಡೆ, ರಾಜ್‌ ಕುಮಾರ್‌ ಮತ್ತು ಯೂನುಸ್‌ ಖಾಝಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...