ವಕ್ಫ್‌ ಕಾಯ್ದೆ | ‘ವಕ್ಫ್ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುತ್ತಿದೆ’; ಢಾಕಾದಲ್ಲಿ ಪ್ರತಿಭಟನೆ

Date:

ಭಾರತದ ಕೇಂದ್ರ ಸರ್ಕಾರವು ‘ವಕ್ಫ್‌ ತಿದ್ದುಪಡಿ ಕಾಯ್ದೆ-2025’ಅನ್ನು ಜಾರಿಗೊಳಿಸಿದೆ. ಈ ಮೂಲಕ, ಭಾರತದಾದ್ಯಂತ ವಕ್ಫ್‌ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುವ ಹುನ್ನಾರ ಹೊಂದಿದೆ. ಮುಸ್ಲಿಮರನ್ನು ದಮನ ಮಾಡಲು ಯತ್ನಿಸುತ್ತಿದೆ ಎಂದು ಬಾಂಗಾದೇಶದ ಮುಸ್ಲಿಂ ಸಂಘಟನೆಗಳು ಆರೋಪಿಸಿವೆ. ಕಾಯ್ದೆಯಲ್ಲಿ ಹಿಂಪಡೆದುಕೊಳ್ಳುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿವೆ.

ಬಾಂಗ್ಲಾ ರಾಜಧಾನಿ ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಬಲಪಂಥೀಯ ಇಸ್ಲಾಮಿಸ್ಟ್ ಪಕ್ಷ ‘ಖಿಲಾಫತ್ ಮಜ್ಲಿಸ್’ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ‘ಭಾರತದಲ್ಲಿ ಮುಸ್ಲಿಮರಿಗೆ ಸೇರಿದ ಭೂಮಿಯನ್ನು ಅತಿಕ್ರಮಿಸಲಾಗುತ್ತಿದೆ’ ಎಂದು ಆರೋಪಿಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಪಕ್ಷದ ಮುಖ್ಯಸ್ಥ ಮೌಲಾನಾ ಮಾಮುನುಲ್ ಹಕ್, “ಮುಸ್ಲಿಮರ ಖಾಸಗಿ ಮತ್ತು ವಕ್ಫ್ ಆಸ್ತಿಗಳನ್ನು ಅತಿಕ್ರಮಿಸಿಕೊಂಡು ಅಥವಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಅವರು (ಬಿಜೆಪಿ) ದೇವಾಲಯ ಕಟ್ಟುತ್ತಿದ್ದಾರೆ. ಈ ಅತಿಕ್ರಮಣ ಮತ್ತು ಸ್ವಾಧೀನಗಳಿಗೆ ಕಾನೂನು ಚೌಕಟ್ಟನ್ನು ನೀಡಲು ವಕ್ಫ್ ತಿದ್ದುಪಡಿ ಕಾಯ್ದೆ-2025ಯನ್ನು ಅಂಗೀಕರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ವಕ್ಫ್‌ ತಿದ್ದುಪಡಿ ಕಾಯ್ದೆ | ಮೂಗಿಗೆ ತುಪ್ಪ ಹಚ್ಚಲು ಮನೆ ಬಾಗಿಲಿಗೆ ಬರುತ್ತಿದೆ ಬಿಜೆಪಿ!

“ಹಿಂದುತ್ವವಾದಿ ಬಿಜೆಪಿ ಸರ್ಕಾರವು ಭಾರತದಾದ್ಯಂತ ಹಿಂದಿನಿಂದಲೂ ಮುಸ್ಲಿಮರನ್ನು ಕೊಲ್ಲುತ್ತಿದೆ. ಅವರು ಮುಸ್ಲಿಮರ ಮೇಲೆ ದಾಳಿ ಮಾಡಲು ಹಿಂದುತ್ವವಾದಿಗಳನ್ನು ಪ್ರಚೋದಿಸುತ್ತಿದ್ದಾರೆ” ಎಂದು ದೂರಿದ್ದಾರೆ.

“ಭಾರತದಾದ್ಯಂತ ಕಾಯ್ದೆಯ ವಿರುದ್ಧ ಮುಸ್ಲಿಮರು ಪ್ರತಿಭಟನೆಯಲ್ಲಿ ಸಿಡಿದಿದ್ದಾರೆ. ಕಾಯ್ದೆಯು ಮುಸ್ಲಿಮರ ಧಾರ್ಮಿಕ ಕಾನೂನುಗಳು ಮತ್ತು ಹಕ್ಕುಗಳ ಮೇಲೆ ಹಸ್ತಕ್ಷೇಪ ಮಾಡುತ್ತದೆ. ಭಾರತದಲ್ಲಿ ಮುಸ್ಲಿಮರ ಹತ್ಯೆ ಮತ್ತು ಮುಸ್ಲಿಮರ ಧಾರ್ಮಿಕ ಭಾವನೆಗೆಳಿಗೆ ಧಕ್ಕೆ ತರಲು ಯತ್ನಿಸುತ್ತಿರುವ ಭಾರತದ ಸರ್ಕಾರ ವಿರುದ್ಧ ಮುಸ್ಲಿಂ ಜಗತ್ತು ಧ್ವನಿ ಎತ್ತಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...