ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

Date:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ. ಶ್ರೀಲಂಕಾದಲ್ಲಿ ಭಾನುವಾರ ಇಂಧನ ದರವನ್ನು ಪರಿಷ್ಕರಿಸಲಾಗಿದ್ದು, 25%ರಷ್ಟು ಹೆಚ್ಚಿಸಲಾಗಿದೆ.

ಸಾಮಾನ್ಯ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 317 ರೂಪಾಯಿಗಳಿಂದ 398 ರೂಪಾಯಿಗಳಿಗೆ ಏರಿಕೆಯಾಗಿದೆ. ಇನ್ನು ಸಾರ್ವಜನಿಕ ಸಾರಿಗೆಯಲ್ಲಿ ಹೆಚ್ಚಾಗಿ ಬಳಕೆಯಾಗುವ ಡೀಸೆಲ್ ಬೆಲೆಯು ಲೀಟರ್‌ಗೆ 79 ರೂಪಾಯಿ ಏರಿಕೆಯಾಗಿದ್ದು, ಈಗ 382 ರೂಪಾಯಿ ತಲುಪಿದೆ.

ಕಳೆದ ವಾರವಷ್ಟೇ, ಶ್ರೀಲಂಕಾ ಸರ್ಕಾರವು ಇಂಧನ ದರದಲ್ಲಿ 8% ರಷ್ಟು ಏರಿಕೆ ಮಾಡಿತ್ತು. ಬಳಕೆಯನ್ನು ನಿಯಂತ್ರಿಸಲು ಪಡಿತರ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು. “ಇತ್ತೀಚಿನ ಬೆಲೆ ಏರಿಕೆಯ ಮೂಲಕ ಇಂಧನ ಬಳಕೆಯಲ್ಲಿ 15%ನಿಂದ 20% ರಷ್ಟು ಕಡಿತವನ್ನು ನಿರೀಕ್ಷಿಸುತ್ತಿದ್ದೇವೆ” ಎಂದು ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಶನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲದವರೆಗೆ ಸಂಘರ್ಷ ಮುಂದುವರಿಯುವ ಸಾಧ್ಯತೆಯಿದ್ದು, ಇದು ದೇಶದ ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರಬಹುದು ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಕಳೆದ ವಾರ ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಇಂಧನ ಉಳಿತಾಯಕ್ಕಾಗಿ ಶ್ರೀಲಂಕಾದಲ್ಲಿ ಕಳೆದ ಬುಧವಾರದಿಂದ ಜಾರಿಗೆ ಬರುವಂತೆ ವಾರಕ್ಕೆ ನಾಲ್ಕು ದಿನಗಳ ಕೆಲಸದ ಅವಧಿಯನ್ನು ಘೋಷಿಸಲಾಗಿದೆ. ಅಲ್ಲದೆ, ಸಾಧ್ಯವಿರುವ ಕಡೆಗಳಲ್ಲಿ ಉದ್ಯೋಗಿಗಳಿಗೆ ‘ಮನೆಯಿಂದಲೇ ಕೆಲಸ’ ಮಾಡುವ ವ್ಯವಸ್ಥೆಯನ್ನು ಮರುಜಾರಿಗೊಳಿಸುವಂತೆ ಉದ್ಯೋಗದಾತರಿಗೆ ಸೂಚಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ವಿಶ್ವದ ಒಟ್ಟು ತೈಲ ರಫ್ತಿನ 20%ರಷ್ಟು ಭಾಗವು ಇರಾನ್ ನಿಯಂತ್ರಣದಲ್ಲಿರುವ ‘ಹಾರ್ಮುಜ್ ಜಲಸಂಧಿ’ಯ ಮೂಲಕವೇ ಸಾಗಾಟವಾಗುತ್ತದೆ. ಈ ಜಲಸಂಧಿಯನ್ನು ಇರಾನ್ ಸ್ಥಗಿತೊಳಿಸಿರುವ ಕಾರಣ, ಇಂಧನ ಬಿಕ್ಕಟ್ಟು ಎದುರಾಗಿದೆ. ಭಾರತದಲ್ಲಿಯೂ ಇಂಧನ ಮತ್ತು ಎಲ್‌ಪಿಜಿ ಕೊರತೆ ಎದುರಾಗಿದ್ದು, ಭಾರತದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸರಬರಾಜು ಸ್ಥಗಿತಗೊಂಡಿದೆ. ಗೃಹ ಬಳಕೆಯ ಎಲ್‌ಪಿಜಿ ಲಭ್ಯತೆಯೂ ಅಸಪರ್ಮಕವಾಗಿದೆ. ಈ ನಡುವೆ, ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂ. ಮತ್ತು ಕೈಗಾರಿಕಾ ಡೀಸೆಲ್‌ ದರವನ್ನು 22 ರೂ. ಹೆಚ್ಚಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....