ಇರಾನ್-ಇಸ್ರೇಲ್ ಸಂಘರ್ಷ ಶುರುವಾಗಿದ್ದು ಎಲ್ಲಿಂದ? ಇತಿಹಾಸದ ಹಿನ್ನೋಟ!

Date:

ಕಳೆದ ವಾರ, ಜೂನ್ 13ರಂದು ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ‘ಆಪರೇಷನ್ ರೈಸಿಂಗ್ ಲಯನ್’ ಹೆಸರಿನಲ್ಲಿ ಇಸ್ರೇಲ್ ನಡೆಸಿದ ದಾಳಿಯಿಂದ ಇರಾನ್‌ನಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯು ಇರಾನ್‌ನ ಪರಮಾಣು ನೆಲೆಯನ್ನು ಗುರಿಯಾಗಿಸಿಕೊಂಡಿತ್ತು ಎಂದು ಇಸ್ರೇಲ್ ಹೇಳಿಕೊಂಡಿದೆ. ಇಸ್ರೇಲ್ ಮೇಲೆ ಇರಾನ್ ಕೂಡ ಪ್ರತಿದಾಳಿ ನಡೆಸಿದ್ದು, ಇಸ್ರೇಲ್‌ನಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಧ್ಯಪ್ರಾಚ್ಯದಲ್ಲಿ, ಇಸ್ರೇಲ್‌ನ ದಮನಕಾರಿ ಆಕ್ರಮಣ, ನಿಲುವುಗಳನ್ನು ಪ್ರಬಲವಾಗಿ ವಿರೋಧಿಸುವ ಅತಿದೊಡ್ಡ ಶಕ್ತಿ ಇರಾನ್ ಮಾತ್ರವೇ ಆಗಿದೆ. ಸುಮಾರು 2 ವರ್ಷಗಳ ಕಾಲ ಪ್ಯಾಲೆಸ್ತೀನ್ ಮೇಲೆ ಆಕ್ರಮಣ ಮತ್ತು ನರಮೇಧ ನಡೆಸಿರುವ ಇಸ್ರೇಲ್ ವಿರುದ್ಧ ಅರಬ್ ರಾಷ್ಟ್ರವಲ್ಲದ ಶಕ್ತಿಯೊಂದು ಎದ್ದು ನಿಂತಿದೆ. ಇರಾನ್‌ನ ಪ್ರತಿದಾಳಿಯಿಂದ ಇಸ್ರೇಲ್‌ ತತ್ತರಿಸಿಹೋಗಿದೆ. ಸದ್ಯಕ್ಕೆ, ಉಭಯ ರಾಷ್ಟ್ರಗಳ ನಡುವಿನ ಸಂಘರ್ಷವು 1979ರ ಇರಾನ್‌ ಕ್ರಾಂತಿಯ ಸಂದರ್ಭವನ್ನು ನೆನಪಿಸುತ್ತಿವೆ.

1979ಕ್ಕೂ ಮೊದಲು, ಇರಾನ್ ಮತ್ತು ಇಸ್ರೇಲ್ ಅತ್ಯುತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದವು. ಇರಾನ್‌ನ ಶಾಹ್ ಮೊಹಮ್ಮದ್ ರೆಜಾ ಪಹ್ಲವಿ ಆಡಳಿತದಲ್ಲಿ ಇರಾನ್ ಅಮೆರಿಕ ಮತ್ತು ಯುಕೆಯ ಮಿತ್ರರಾಷ್ಟ್ರವಾಗಿತ್ತು. ಇಸ್ರೇಲ್ ಮತ್ತು ಇರಾನ್ ಎರಡೂ ರಾಷ್ಟ್ರಗಳು ಅರಬ್ ರಾಷ್ಟ್ರಗಳ ಧೋರಣೆ ಮತ್ತು ಮಧ್ಯಪ್ರಾಚ್ಯದಲ್ಲಿ ಸೋವಿಯತ್‌ನ ಪ್ರಭವವನ್ನು ಎದುರಿಸಲು ಒಗ್ಗಟ್ಟಿನ ಕಾರ್ಯತಂತ್ರದಲ್ಲಿ ಜೊತೆಯಾಗಿದ್ದವು. ಇದು ಅಮೆರಿಕದ ಹಿತಾಸಕ್ತಿಗೆ ಅನುಗುಣವಾಗಿತ್ತು. ಎರಡು ರಾಷ್ಟ್ರಗಳು ತೈಲ ರಫ್ತು ಮತ್ತು ಗುಪ್ತಚರ ಮಾಹಿತಿ ಹಂಚಿಕೆ ಸೇರಿದಂತೆ ಅನೇಕ ಆರ್ಥಿಕ ಮತ್ತು ಮಿಲಿಟರಿ ಉದ್ಯಮಗಳಲ್ಲಿ ಸಹಭಾಗಿಯಾಗಿದ್ದವು. ಆದರೆ, 1979ರಲ್ಲಿ ಈ ಸಂಬಂಧ ಕಳಚಿಬಿದ್ದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1979ರ ಇರಾನ್ ಕಾಂತ್ರಿಯು ಇರಾನ್‌ನಲ್ಲಿ ಆಯತೊಲ್ಲಾ ಖೊಮೇನಿ ನೇತೃತ್ವದ ಧಾರ್ಮಿಕ ಆಡಳಿತವನ್ನು ಜಾರಿಗೆ ತಂದಿತು. ಖೊಮೇನಿ ಅವರು ತೀವ್ರ ಝಿಯಾನ್ ವಿರೋಧಿಯಾಗಿದ್ದರು. ಅವರು ಇಸ್ರೇಲ್‌ಅನ್ನು ಕಾನೂನುಬಾಹಿರ ರಾಷ್ಟ್ರವೆಂದು ಘೋಷಿಸಿದರು. ಇಸ್ರೇಲ್ ತಮ್ಮ ಮುಸ್ಲಿಂ ಸಹೋದರರಿಗೆ (ಪ್ಯಾಲೆಸ್ತೀನಿಯರು) ಸೇರಿದ ಭೂಮಿಯನ್ನು ಕದ್ದಿದೆ ಎಂದು ಆರೋಪಿಸಿದರು. ಖೊಮೇನಿ ಅವರು ತಮ್ಮ ಆಡಳಿತದ ಮೊಲದ ಕ್ರಮವಾಗಿ ಇಸ್ರೇಲ್ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದರು.

ಈ ಲೇಖನ ಓದಿದ್ದೀರಾ?: ಇರಾನ್‌ನೊಂದಿಗೆ ಅಕ್ರಮ ಯುದ್ಧ ಆರಂಭಿಸಿ, ನಿಲ್ಲಿಸಲು ತಿಳಿಯದೆ ಅಮೆರಿಕ ಸಹಾಯ ಕೇಳುತ್ತಿದೆಯೇ ಇಸ್ರೇಲ್?

1982ರಲ್ಲಿ ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ಆಕ್ರಮಣ ನಡೆಸಿದ ಸಮಯದಲ್ಲಿ ಹಿಜ್ಬುಲ್ಲಾ ಸಂಘಟನೆ ಸ್ಥಾಪನೆಯಾಯಿತು. ಇಸ್ರೇಲ್‌ ವಿರುದ್ಧದ ಕಾರ್ಯತಂತ್ರದಲ್ಲಿ ಹಿಜ್ಬುಲ್ಲಾ ಅವರನ್ನು ಪರೋಕ್ಷವಾಗಿ ಇರಾನ್‌ ಬೆಂಬಲಿಸಿತು. ಹಿಜ್ಬುಲ್ಲಾಗೆ ಆರ್ಥಿಕ ಮತ್ತು ತರಬೇತಿಯ ಬೆಂಬಲವನ್ನು ಇರಾನ್ ಒದಗಿಸಿತು.

ಅಂದಿನಿಂದ ಈವರೆಗೆ ಇಸ್ರೇಲ್-ಇರಾನ್ ನಡುವೆ ಆಗ್ಗಾಗ್ಗೆ ಸಂಘರ್ಷ ನಡೆಯುತ್ತಿದೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್‌ಅನ್ನು ಎದುರಿಸಬಹುದಾದ ಅತಿ ದೊಡ್ಡ ಶಕ್ತಿಯಲ್ಲಿ ಇರಾನ್ ನಿಂತಿದೆ. ಅಲ್ಲದೆ, ಎರಡೂ ರಾಷ್ಟ್ರಗಳು ಅಘೋಷಿತ ಪರಮಾಣ ಶಕ್ತಿಗಳಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...