ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು; ಹೆಚ್ಚಿದ ಶಾಖ – ಸಾವಿರಾರು ಜನರ ಸ್ಥಳಾಂತರ

Date:

ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೆಲಿಕಾಪ್ಟರ್‌ ಮೂಲಕ ನೀರನ್ನು ಸುರಿಯುತ್ತಿದ್ದಾರೆ. ಬೆಂಕಿ ವಸತಿ ಪ್ರದೇಶ, ಮನೆಗಳಿಗೆ ಪಸರಿಸದಂತೆ ತಡೆದಿದ್ದಾರೆ. ಆದರೆ, ಕಾಡ್ಗಿಚ್ಚಿನಿಂದಾಗಿ ರಾಜ್ಯದಲ್ಲಿ ಶಾಖವು ತೀವ್ರವಾಗಿ ಹೆಚ್ಚಾಗಿದ್ದು, ಸುಮಾರು 26,000 ಜನರನ್ನು ಸ್ಥಳಾಂತರಿಸಲಾಗಿದೆ.

ಮೊದಲಿಗೆ ಮಂಗಳವಾರ ಮಧ್ಯಾಹ್ನ, ಉತ್ತರ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದ ಬುಟ್ಟೆ ಕೌಂಟಿಯ ಓರೊವಿಲ್ಲೆ ನಗರದ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ, ಬೆಂಕಿಯು 14 ಚದುರ ಕಿ.ಮೀ ವ್ಯಾಪಿಸಿಕೊಂಡಿದೆ. ಇದರಿಂದಾಗಿ, ಇಡೀ ಸ್ಯಾಕ್ರಮೆಂಟೋ ಪ್ರದೇಶ ಹೊಗೆಯಿಂದ ಆವೃತಗೊಂಡಿದೆ.

ಒರೊವಿಲ್ಲೆಯಲ್ಲಿ ಮಂಗಳವಾರ ರಾತ್ರಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ತ್ವರಿತವಾಗಿ ರಕ್ಷಣಾ ಕಾರ್ಯ ಆರಂಭಿಸಲಾಗಿತ್ತು. ಅದಾಗ್ಯೂ, ನಗರವನ್ನು ದಾಟಿ, ಗ್ರಾಮೀಣ ಪ್ರದೇಶಗಳಿಗೆ ಬುಧವಾರ ಬೆಂಕಿ ವಿಸ್ತರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಸಂಜೆಯ ವೇಳೆಗೆ ಬೆಂಕಿ ನಂದಿಸುವ ಕೆಲಸ ಮುಗಿದಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯವನ್ನೂ ನಿಲ್ಲಿಸಿದ್ದಾರೆ. ಸ್ಥಳಾಂತರಗೊಂಡಿರುವ ಬಹುತೇಕ ನಿವಾಸಿಗಳನ್ನು ಶೀಘ್ರದಲ್ಲೇ ಅವರ ಮನೆಗಳಿಗೆ ಮರಳಲು ಅವಕಾಶ ನೀಡಲಾಗುತ್ತದೆ ಎಂದು ಒರೊವಿಲ್ಲೆ ಮೇಯರ್ ಡೇವಿಡ್ ಪಿಟ್‌ಮನ್ ತಿಳಿಸಿದ್ದಾರೆ.

ಏತನ್ಮಧ್ಯೆ, ಒರೊವಿಲ್ಲೆಯಿಂದ ದಕ್ಷಿಣ ಭಾಗಕ್ಕೆ 8 ಕಿ.ಮೀ ದೂರದಲ್ಲಿರುವ ಪಲೆರ್ಮೊ ಪಟ್ಟಣದಲ್ಲಿಯೂ ಬುಧವಾರ ಸಂಜೆ ಮತ್ತೊಂದು ಬೆಂಕಿ ಅವಘಡ ನಡೆದಿದೆ. ಅಲ್ಲಿನ ಜನರನ್ನೂ ಸ್ಥಳಾಂತರಿಸಲಾಗಿದೆ. ಬೆಂಕಿಯನ್ನು ಶೀಘ್ರವೇ ನಂದಿಸಲಾಗಿದೆ.

ಒರೊವಿಲ್ಲೆ ಮತ್ತು ಪಲೆರ್ಮೊ ಬಳಿ ಸಂಭವಿಸಿದ ಬೆಂಕಿಯಿಂದಾದ ಆಸ್ತಿ ನಷ್ಟದ ಬಗ್ಗೆ ತಕ್ಷಣದ ಅಧಿಕೃತ ವರದಿ ಬಂದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...