ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ: ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ

Date:

ಭಾರತ ಭಯೋತ್ಪಾದನೆಯ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ ಎಂದು ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ ಹೇಳಿದೆ.

ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪ್ರತಿಪಾದಿಸಲು ಮೇ25ರಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷ ನಿಯೋಗವು ಫ್ರಾನ್ಸ್‌ಗೆ ಭೇಟಿ ನೀಡಿದೆ. ಮೇ 27ರವರೆಗೆ ಫ್ರಾನ್ಸ್‌ನಲ್ಲಿರಲಿದೆ. ಅಲ್ಲಿ ನಡೆದ ಸರಣಿ ಕಾರ್ಯಕ್ರಮಗಳ ಬಗ್ಗೆ ಫ್ರಾನ್ಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹಂಚಿಕೊಂಡಿದೆ.

ಇದನ್ನು ಓದಿದ್ದೀರಾ? ದೆಹಲಿ ನ್ಯಾಯಮೂರ್ತಿ ಬಂಗಲೆ; ಭರ್ತಿ ಚೀಲಗಳ ನಗದಿಗೆ ಬೆಂಕಿ ಬಿದ್ದ ಕತೆಯೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಯಾರಿಸ್ ಮೂಲದ ವಿವಿಧ ಚಿಂತಕರನ್ನು ಭಾರತೀಯ ಸರ್ವಪಕ್ಷ ನಿಯೋಗವು ಭೇಟಿಯಾಗಿದೆ. ಅವರೊಂದಿಗೆ ಭಯೋತ್ಪಾದನೆಯ ವಿರುದ್ಧ ಭಾರತದ ಬಲವಾದ, ಸ್ಪಷ್ಟ ಸಂದೇಶದ ಬಗ್ಗೆ ಮತ್ತು ಭಯೋತ್ಪಾದನೆಯು ಜಗತ್ತಿಗೆ ಒಡ್ಡಿದ ಸವಾಲಿನ ಬಗ್ಗೆ ಚರ್ಚಿಸಿದರು.

ಏಪ್ರಿಲ್ 22ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಪಹಲ್ಗಾಮ್‌ನಲ್ಲಿ ನಾಗರಿಕರ ಮೇಲೆ ದಾಳಿ ನಡೆಸಿ 26 ಪ್ರವಾಸಿಗರ ಹತ್ಯೆ ಮಾಡಿದೆ. ಇದಕ್ಕೆ ಪ್ರತೀಕಾರವಾಗಿ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಭಾರತೀಯ ಸೇನೆ ನಡೆಸಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಉಗ್ರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ 100ಕ್ಕೂ ಅಧಿಕ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಕದನ ವಿರಾಮ ಒಪ್ಪಂದ ನಡೆದಿದೆ.

ಇದನ್ನು ಓದಿದ್ದೀರಾ? ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ; ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗ ರಚನೆ

ಇದಾದ ಬಳಿಕ ಭಾರತವು ಭಯೋತ್ಪಾದನೆ ವಿರುದ್ಧವಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗ ಸೇರಿದಂತೆ ಒಟ್ಟು ಏಳು ನಿಯೋಗಗಳನ್ನು ರಚಿಸಿದೆ. ಈ ನಿಯೋಗವು ಗಯಾನಾ, ಪನಾಮ, ಕೊಲಂಬಿಯಾ, ಬ್ರೆಜಿಲ್, ಫ್ರಾನ್ಸ್, ಯುಎಸ್‌ ಸೇರಿದಂತೆ ಹಲವು ದೇಶಗಳಿಗೆ ಭೇಟಿ ನೀಡುತ್ತಿದೆ.

ಫ್ರಾನ್ಸ್‌ಗೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷ ನಿಯೋಗವು ಭೇಟಿ ನೀಡಿದೆ. “ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ಹಾಳುಮಾಡಲು ಉದ್ದೇಶಪೂರ್ವಕ ಪ್ರಯತ್ನ. ಆಪರೇಷನ್ ಸಿಂಧೂರ ಮೂಲಕ ಭಾರತ ದಿಟ್ಟವಾಗಿ ಪ್ರತಿಕ್ರಿಯಿಸಿದೆ” ಎಂದು ನಿಯೋಗವು ಹೇಳಿದೆ.

ಫ್ರಾನ್ಸ್‌ನ ಚಿಂತಕರೊಂದಿಗೆ ಸಂವಾದ ನಡೆಸಿದ ವಿವರವನ್ನು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. “ಸರ್ವಪಕ್ಷ ಭಾರತೀಯ ಸಂಸದೀಯ ನಿಯೋಗವು ವಿವಿಧ ಫ್ರೆಂಚ್ ಚಿಂತಕರ ಜೊತೆ ರ್ಚೆಯನ್ನು ನಡೆಸಿದೆ. ಭಯೋತ್ಪಾದನೆಯ ವಿರುದ್ಧ ಭಾರತದ ಬಲವಾದ ಮತ್ತು ಸ್ಪಷ್ಟ ಸಂದೇಶದ ಕುರಿತು ಚಿಂತಕರ ಚಾವಡಿಗೆ ವಿವರಿಸಲಾಗಿದೆ” ಎಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...