ಗಾಝಾದಲ್ಲಿ ನರಮೇಧ ತಡೆಗಟ್ಟಿ: ಇಸ್ರೇಲ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶ

Date:

ಗಾಝಾ ಪಟ್ಟಿಯಲ್ಲಿ ಜನಾಂಗೀಯ ಹತ್ಯೆ ನಡೆಯದಂತೆ ಖಾತ್ರಿಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶುಕ್ರವಾರ ಅಂತಾರಾಷ್ಟ್ರೀಯ ನ್ಯಾಯಾಲಯವು ಇಸ್ರೇಲ್ ಗೆ ಸೂಚಿಸಿದೆ.

ಇಸ್ರೇಲ್ ವಿರುದ್ಧ ಜನಾಂಗೀಯ ಹತ್ಯೆಯ ಆರೋಪ ಮಾಡಿ, ಒಂಭತ್ತು ತಾತ್ಕಾಲಿಕ ಕ್ರಮಕ್ಕಾಗಿ ಆಗ್ರಹಿಸಿದ್ದ ದಕ್ಷಿಣ ಆಫ್ರಿಕಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯವು ಈ ಸೂಚನ ನೀಡಿದೆ.

ಗಾಝಾ ಪಟ್ಟಿಯಲ್ಲಿನ ಪ್ಯಾಲೆಸ್ತೀನಿಯನ್ನರಿಗೆ ಮೂಲಭೂತ ಸೇವೆಗಳು ಹಾಗೂ ಮಾನವೀಯ ನೆರವುಗಳನ್ನು ಒದಗಿಸಲು ಅವಕಾಶ ಒದಗಿಸಬೇಕು ಎಂದೂ ನ್ಯಾಯಾಲಯವು ಇಸ್ರೇಲ್‌ಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಈ ಮಧ್ಯಂತರ ಆದೇಶವು ಇಸ್ರೇಲ್‌ಅನ್ನು ಅಂತಾರಾಷ್ಟ್ರೀಯ ಕಾನೂನು ಬಾಧ್ಯತೆಗೆ ಒಳಪಡಿಸುತ್ತದೆ ಎಂದು ಹೇಳಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷ ಜೋನ್ ಇ. ಡೊನೊಘ್, ಆದೇಶವನ್ನು ಪಾಲಿಸಿರುವುದರ ಕುರಿತು ಒಂದು ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು ಇಸ್ರೇಲ್ಗೆ ಆದೇಶಿಸಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ತನ್ನ ಆದೇಶವನ್ನು ಜಾರಿಗೊಳಿಸುವ ಯಾವುದೇ ಅಧಿಕಾರ ಇಲ್ಲದೆ ಇರುವುದರಿಂದ, ಇಸ್ರೇಲ್ ಅದರ ಆದೇಶವನ್ನು ಪಾಲಿಸಲಿದೆಯೆ ಎಂಬುದು ಇನ್ನೂ ಚರ್ಚಾಸ್ಪದವಾಗಿಯೇ ಉಳಿದಿದೆ. ಉದಾಹರಣೆಗೆ, ಮಾರ್ಚ್ 2022ರಲ್ಲಿ ಉಕ್ರೇನ್ ಮೇಲಿನ ಆಕ್ರಮಣವನ್ನು ಸ್ಥಗಿತಗೊಳಿಸುವಂತೆ ರಷ್ಯಾಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶಿಸಿತ್ತು.

ಕಾನೂನಾತ್ಮಕವಾಗಿ ಈ ಆದೇಶವನ್ನು ಪಾಲಿಸಲೇಬೇಕಿತ್ತಾದರೂ, ಮಾಸ್ಕೊ ಅದನ್ನು ನಿರ್ಲಕ್ಷಿಸಲು ನಿರ್ಧರಿಸಿತು. ಅದರ ಪರಿಣಾಮ ಒತ್ತೆಯಾಳು ಪ್ರಕರಣಗಳು ಮುಂದುವರಿದವು. ಆದರೆ, ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿರುವ ಆದೇಶವು ಅಂತಾರಾಷ್ಟ್ರೀಯ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುವಲ್ಲಿ ಗಮನಾರ್ಹ ಪಾತ್ರ ವಹಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...