ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಯೆಮನ್ ಹೌತಿ ಸರ್ಕಾರದ ಪ್ರಧಾನಿ ಹತ್ಯೆ: ಪ್ರತಿಕಾರದ ಎಚ್ಚರಿಕೆ

Date:

ಯೆಮನ್‌ನ ಹೌತಿ ಸಂಘಟನೆ ನಿಯಂತ್ರಣದಲ್ಲಿರುವ ರಾಜಧಾನಿ ಸನಾ ನಗರದ ಮೇಲೆ ಇಸ್ರೇಲ್ ನಡೆಸಿದ ಭಾರೀ ವೈಮಾನಿಕ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಘಲೆಬ್ ಅಲ್-ರಾಹ್ವಿ ಸೇರಿದಂತೆ ಹಲವು ಹಿರಿಯ ಸಚಿವರು ಮತ್ತು ಅಧಿಕಾರಿಗಳು ಹತರಾಗಿದ್ದಾರೆ ಎಂದು ಹೌತಿ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್ ಮುಖ್ಯಸ್ಥ ಮಹ್ದಿ ಅಲ್-ಮಷತ್ ಶನಿವಾರ ದೃಢಪಡಿಸಿದ್ದಾರೆ.

ಈ ದಾಳಿ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಹೌತಿಗಳು ತೀವ್ರ ಪ್ರತೀಕಾರದ ಎಚ್ಚರಿಕೆ ನೀಡಿದ್ದಾರೆ.

ಗುರುವಾರ (ಆಗಸ್ಟ್ 28) ನಡೆದ ಈ ದಾಳಿಯಲ್ಲಿ ಪ್ರಧಾನಿ ಅಲ್-ರಾಹ್ವಿ ಅವರ ಜೊತೆಗೆ ರಕ್ಷಣಾ ಸಚಿವ ಮೊಹಮದ್ ನಾಸರ್ ಅಲ್-ಅತಿಫಿ ಸೇರಿದಂತೆ ಇತರ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಕೊಲ್ಲಲ್ಪಟ್ಟಿದ್ದಾರೆ ಎಂದು ಹೌತಿ ಮೂಲಗಳು ತಿಳಿಸಿವೆ. ದಾಳಿಯ ಸಂದರ್ಭದಲ್ಲಿ ಸರ್ಕಾರಿ ಕಟ್ಟಡದಲ್ಲಿ ನಡೆಯುತ್ತಿದ್ದ ಒಂದು ಸಾಮಾನ್ಯ ಸಭೆಯನ್ನು ಗುರಿಯಾಗಿಸಲಾಗಿತ್ತು ಎಂದು ಮಷತ್ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ. ಆದರೆ, ರಕ್ಷಣಾ ಸಚಿವರ ಸಾವು ಖಚಿತವಾಗಿಲ್ಲ ಎಂದು ಕೆಲವು ವರದಿಗಳು ಸೂಚಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್ ಸೇನೆಯು ಶುಕ್ರವಾರ ಹೇಳಿಕೆ ನೀಡಿ, ಹೌತಿ ಸಂಘಟನೆಯ ಹಿರಿಯ ನಾಯಕರು ಮತ್ತು ರಕ್ಷಣಾ ಸಚಿವರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ತಿಳಿಸಿತ್ತು. “ದಾಳಿಯ ಫಲಿತಾಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಇಸ್ರೇಲ್ ಹೇಳಿದ್ದು, ಇದು ಹೌತಿಗಳ ಮೇಲಿನ ಅತ್ಯಂತ ಭಾರೀ ಹೊಡೆತ ಎಂದಿದೆ. ಅಲ್-ರಾಹ್ವಿ ಅವರು ಕಳೆದ ಒಂದು ವರ್ಷದ ಹಿಂದೆ (ಆಗಸ್ಟ್ 2024) ಪ್ರಧಾನಿಯಾಗಿ ನೇಮಕಗೊಂಡಿದ್ದರು. ಆದರೆ, ಉಪ ಪ್ರಧಾನಿ ಮೊಹಮದ್ ಮೊಫ್ತಾ ಅವರು ಸರ್ಕಾರದ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಅಲ್-ರಾಹ್ವಿ ಅವರ ಸಾವಿನ ನಂತರ, ಪ್ರಧಾನ ಮಂತ್ರಿಗಳ ಕರ್ತವ್ಯಗಳನ್ನು ಮೊಫ್ತಾ ಅವರಿಗೆ ನಿಯೋಜಿಸಲಾಗಿದೆ ಎಂದು ಹೌತಿ ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

2023ರ ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಜಾ ಮೇಲೆ ದಾಳಿ ಆರಂಭಿಸಿದ ನಂತರ, ಹೌತಿಗಳು ಇಸ್ರೇಲ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕಾ ಹೌತಿ ಗುರಿಗಳ ಮೇಲೆ ದಾಳಿಗಳನ್ನು ತೀವ್ರಗೊಳಿಸಿವೆ. ಈ ಇತ್ತೀಚಿನ ದಾಳಿ ಹೌತಿಗಳ ನಾಯಕತ್ವಕ್ಕೆ ದೊಡ್ಡ ಹೊಡೆತವಾಗಿದ್ದು, ಅಮೆರಿಕಾ ಮತ್ತು ಇಸ್ರೇಲ್ ದಾಳಿಗಳು ಆರಂಭಗೊಂಡ ನಂತರ ಕೊಲ್ಲಲ್ಪಟ್ಟ ಅತ್ಯಂತ ಹಿರಿಯ ಹೌತಿ ಆಡಳಿತಾಧಿಕಾರಿ ಇವರು ಎಂದು ವರದಿಗಳು ಹೇಳಿವೆ.

ಮಹ್ದಿ ಅಲ್-ಮಷತ್ ಅವರು ತಮ್ಮ ಹೇಳಿಕೆಯಲ್ಲಿ, “ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಗಾಯಗಳಿಂದಲೇ ನಾವು ವಿಜಯವನ್ನು ದಾಖಲಿಸುತ್ತೇವೆ” ಎಂದು ಹೇಳಿದ್ದಾರೆ. ಅಲ್ಲದೆ, ವಿದೇಶಿ ಕಂಪನಿಗಳು ಇಸ್ರೇಲ್ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ. ಗಾಜಾ ಮೇಲಿನ ದಾಳಿ ನಿಲ್ಲುವವರೆಗೆ ತಮ್ಮ ನಿಲುವನ್ನು ಬದಲಿಸುವುದಿಲ್ಲ ಎಂದು ಹೌತಿಗಳು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...