ಅಮೆರಿಕದಲ್ಲಿ ಮೂವರು ಭಾರತೀಯ ಸಂಜಾತ ವಿದ್ಯಾರ್ಥಿಗಳ ನಿಗೂಢ ಸಾವು

Date:

ಅಮೆರಿಕದಲ್ಲಿ ತಿಂಗಳೊಳಗೆ ಮೂವರು ಭಾರತೀಯ ಸಂಜಾತ ವಿದ್ಯಾರ್ಥಿಗಳ ನಿಗೂಢ ಸಾವು ಅನಿವಾಸಿ ಭಾರತೀಯರ ನಡುವೆ ಕಳವಳ ಮೂಡಿಸಿದೆ

ಕೆಲವೇ ವಾರಗಳ ಅಂತರದಲ್ಲಿ ಅಮೆರಿಕದಲ್ಲಿ ಮೂವರು ಭಾರತೀಯ ಸಂಜಾತ ಅಮೆರಿಕದ ವಿದ್ಯಾರ್ಥಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಕಳವಳಕಾರಿ ಪ್ರಕರಣಗಳು ವರದಿಯಾಗಿವೆ. 

ಭಾರತೀಯ ಮೂಲದ ನೀಲ್ ಆಚಾರ್ಯ ನಿಗೂಢ ಸಾವು ಮತ್ತು ವಿವೇಕ್ ಸೈನ್ ಕೊಲೆಯಾಗಿ ಪತ್ತೆಯಾಗಿರುವ ಬೆನ್ನಲ್ಲೇ ಇದೀಗ ಓಹಿಯೋದಲ್ಲಿ ಮತ್ತೊಬ್ಬ ಭಾರತೀಯ ಸಂಜಾತ ಅಮೆರಿಕನ್ ವಿದ್ಯಾರ್ಥಿಯ ಶವ ಗುರುವಾರ ಪತ್ತೆಯಾಗಿದೆ ಎಂದು ಅಮೆರಿಕದ ನ್ಯೂಯಾರ್ಕನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.

ಆದರೆ, ಗುರುವಾರ ಶವವಾಗಿ ಪತ್ತೆಯಾದ ಓಹಿಯೋ ನಿವಾಸಿಯಾಗಿದ್ದ ಶ್ರೇಯಸ್ ರೆಡ್ಡಿ ಬೆನಿಗೇರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿಲ್ಲ ಎಂದೂ ರಾಯಭಾರಿ ಕಚೇರಿ ತಿಳಿಸಿದೆ. “ಶ್ರೇಯಸ್  ಸಾವಿಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಕೊಲೆಯಾಗಿರುವ ಸಂಭವವಿಲ್ಲ” ಎಂದು ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. ಬೆನ್ನಿಗೇರಿ ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್‌ನ ವಿದ್ಯಾರ್ಥಿಯಾಗಿದ್ದ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿ ಪ್ಯುರ್‍‌ಡ್ಯೂ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದ ನೀಲ್ ಆಚಾರ್‍ಯ ಕಣ್ಮರೆಯಾಗಿ ನಂತರ ಶವವಾಗಿ ಪತ್ತೆಯಾಗಿದ್ದರು.  ವಿವೇಕ್ ಜನವರಿ 16ರಂದು ಜಾರ್ಜಿಯದ ಲಿಥೋನಿಯ ನಗರದ ನಿವಾಸಿಯಿಂದ ಕೊಲೆಯಾಗಿದ್ದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...